Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಮೂರನೇ ಕಣ್ಣು: ಅನಿಮಿಷ(11)
ಮೂರನೇ ಕಣ್ಣು: ಅನಿಮಿಷ(11)
October 19, 2025
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
Copyright © 2026 Bayalu