Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ಗಂಟಿನ ನಂಟು
Share:
Poems

ಗಂಟಿನ ನಂಟು

November 7, 2020 ಕೆ.ಆರ್ ಮಂಗಳಾ
ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...
ಹೀಗೊಂದು ಸಂವಾದ…
Share:
Poems

ಹೀಗೊಂದು ಸಂವಾದ…

April 6, 2023 ಕೆ.ಆರ್ ಮಂಗಳಾ
ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು ಬಯಕೆಯ ಸೆಲೆಗೆ ಮರುಳಾಗಿಹುದು ಕಾಣುವೆನೆಂತು ಜೀವದ ಸೊಬಗ ಅರಿಯುವುದೆಂತು ಪ್ರಾಣದ ಹೊಲಬ ಗೊತ್ತಿಲ್ಲದ ನಡಿಗೆ ಕತ್ತಲ ದಾರಿ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
Copyright © 2025 Bayalu