Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ಈ  ದಾರಿ…
Share:
Poems

ಈ ದಾರಿ…

May 10, 2023 ಜ್ಯೋತಿಲಿಂಗಪ್ಪ
ಈ ದಾರಿ ಹೋಗುವುದು ಎಲ್ಲಿಗೆ ನಾನೂ ಅರಿಯೆ ನೀವೂ ಅರಿಯೆರಿ ಅರಿದವನಂತೆ ನಾನು ಹೋಗುತಿರಲು ಅರಿಯದವರಂತೆ ನೀವು ಸುಮ್ಮನೇ ಇರುವಿರಿ ಏನು ಚೆಂದ ಅಲ್ಲಲ್ಲಿಗೆ ಅಲ್ಲಲ್ಲಿಗೆ ದಾರಿ...
ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮರೆತೆ…
ಮರೆತೆ…
July 4, 2022
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಯೋಗ – ಶಿವಯೋಗ
ಯೋಗ – ಶಿವಯೋಗ
August 2, 2019
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಶಿವಾಚಾರ
ಶಿವಾಚಾರ
April 9, 2021
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
Copyright © 2026 Bayalu