Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ತುತ್ತೂರಿ…
ತುತ್ತೂರಿ…
June 10, 2023
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
Copyright © 2026 Bayalu