Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...
ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಬಯಲಾಟ
ಬಯಲಾಟ
March 17, 2021
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
Copyright © 2026 Bayalu