Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನದಿಯನರಸುತ್ತಾ…
Share:
Poems October 6, 2020 ಜ್ಯೋತಿಲಿಂಗಪ್ಪ

ನದಿಯನರಸುತ್ತಾ…

ಜ್ಞಾನವೆಂಬುದೇನು? ಮನೋ ಭೇದ.
-ಅಲ್ಲಮ
ನಾನು
ಹುಟ್ಟುವಾಗ
ಹೇಳಿ ಬಂದೆನೇ ಸಾಯುವಾಗಲೂ
ಅಷ್ಟೇ ಬದುಕು ಹೇಳದು ಏನೂ
ಈ
ಕಡಲಲಿ
ಕಳೆದಿರುವ ನದಿ ಹುಡುಕುತಿರುವೆ
ಹುಡುಕುತಿರುವ
ನದಿ
ಕಳೆದಿದೆ ಕಡಲು
ಕಡಲಲಿ ಕಳೆಯುವ
ನದಿ
ಹುಡುಕುವುದೇ
ಕಡಲಿನಲಿ ಕಳೆಯುವ ನದಿಯ
ಬೆನ್ನೇರಿದೆ ಉಪ್ಪು
ಅವಲಂಬಿತನ ಹಂಗು ಬಿತ್ತಿದೆ
ದ್ವೇಷದ ಬೀಜ
ಹೇಳು ಸಾಯಲು ಬಿತ್ತ ಬೇಕು
ಬಂಜೆ
ಬೀಜ ಬಿತ್ತಿ ನೆಲ
ಬಂಜೆ ನನ್ನ ಮನಸ್ಸಿಗೆ ನಾನೇ
ಸಾಕ್ಷಿ
ಸದಾ ಸುಳ್ಳು ಒಂದರ
ಪಡಿನೆಳಲು ಇನ್ನೊಂದು
ರೂಹು ಕಣ್ಣ ಚೆಲುವು
ನಾನೇ ಒಂದು ಹೊರೆ
ಈ
ನೆಲಕ್ಕೆ ನನ್ನ ತಲೆಯ ಮೇಲಿನ
ಹೊರೆ
ಯಾಕೆ ಹೊರಿಸಲಿ ನಾನೇ ಹೊರುವೆ
ನಕ್ಕಿತು ನೆಲ
ಕಣ್ಣೀರು ಸವಿದರೆ ಉಪ್ಪರಿಯದು.

Previous post ಮನಸ್ಸು
ಮನಸ್ಸು
Next post ಭಾರ
ಭಾರ

Related Posts

ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...

Comments 1

  1. Nirmala R
    Oct 10, 2020 Reply

    ಕಡಲಲ್ಲಿ ನದಿ ತನ್ನ ಹುಡುಕುವ ಇಮೇಜ್ ಸೊಗಸಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು
April 5, 2026
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ವಚನ – ಚಿಂತನ
ವಚನ – ಚಿಂತನ
October 10, 2023
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
Copyright © 2026 Bayalu