Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನನ್ನು ಕ್ಷಮಿಸು
Share:
Poems April 5, 2026 ಜ್ಯೋತಿಲಿಂಗಪ್ಪ

ನನ್ನನ್ನು ಕ್ಷಮಿಸು

ಆಸೆಗಳಿರಲು ಆತಂಕ
ನಿಲ್ಲದು
ಆಯುಷ್ಯ ಇಳಿಯುವಾಗ ಆಯುಷ್ಯ ರೇಖೆಯ ಹುಡುಗಾಟ

ಹುಟ್ಟಿದರೆ ಸಾವು
ಹುಟ್ಟದಿರೆ ಸಾವಿಲ್ಲ
ಸಾವಿಗೇನು ಕೇಡೇ…

ಸಂತೆಯ ಸದ್ದಿನಲಿ
ಸಂತನಾಗುವೆಯಾದರೆ ಸಂತೆಗೂ ಸದ್ದಿಲ್ಲ

ಆಸೆ ಹುಟ್ಟಿದರೆ
ಆಸೆ ಸಾಯುವವರೆಗೂ ಹುಟ್ಟುತಲೇ ಇರುವೆ

ಸುಡದ ಬಯಕೆಗಳು
ಸುಡುತಲೇ ಇರುವವು

ನನ್ನನ್ನು ಕ್ಷಮಿಸು
ನಾನೇನು ಮಾಡುತ್ತಿದ್ದೇನೆಂದು
ನನಗೇ ಗೊತ್ತಿಲ್ಲ

ಈ
ಸರಿ ತಪ್ಪುಗಳೆಲ್ಲಾ ನನ್ನ
ಅಹಂಕಾರದ ಮುದ್ರೆಗಳು
ಸುಡಲೀ ಅಹಂ

ಸಿಟ್ಟು
ಸಂತಸದಲಿರುವಾಗ
ಮೌನ ಕ್ಷೇಮ

ಕ್ಷಮಿಸುವುದಾದರೆ
ನನ್ನ
ಅಹಂಕಾರವನ್ನ ಕ್ಷಮಿಸು
ಇಲ್ಲಾ
ಮರೆತು ಬಿಡು

ಹಾರಿದೆ
ಕ್ಷಿಪಣಿ; ಪರಿಣಾಮ
ಎದುರಿಸು

ಕಾದಾಟಗಳೆಲ್ಲಾ ಭ್ರಮೆ
ಭ್ರಮೆಗಳಿಗಾಗಿ ಕಾದಾಟ

ನನ್ನ
ರೂಹಿಂಗೆ ನಾನೇ ಮರುಳು
ಕನ್ನಡಿಯ ಹಂಗೇ…

Previous post ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
Next post ನಡೆಯ ಎಡೆ…
ನಡೆಯ ಎಡೆ…

Related Posts

ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...
ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...

Comments 3

  1. ಎನ್.ಪಿ.ಮಂಜುನಾಥ್
    Apr 9, 2026 Reply

    ಸುಡಲು ಸಾಧ್ಯವಾಗದ ಬಯಕೆಗಳು ಸುಡುತ್ತಲೇ ಇರುತ್ತವೆ… ಕಾವ್ಯದ ಚುಟುಕು ಸಾಲುಗಳಲ್ಲಿ ಚಿಂತನೆಗೆ ಹಚ್ಚುವ ಆಳ ವಿಚಾರಗಳಿವೆ…. ನಿಮ್ಮ ಕವನಗಳನ್ನು ತಪ್ಪದೇ ಓದುವೆ🙏

    • GH JYOTILINGAPPA
      Apr 10, 2026 Reply

      ನಿಮ್ಮ ಅಭಿಮಾನ ಮತ್ತು ಓದಿಗೆ ಮನ ತುಂಬಿತು.

  2. ಡಾ.ಉಮೇಶ್ ಸೊರಬ
    Apr 10, 2026 Reply

    ಸಮಕಾಲೀನ ಜಾಗತಿಕ ವಿದ್ಯಮಾನಗಳಿಗೆ ಬೀಜವಾಗಿರುವ ಅಹಮ್ ಅನ್ನು ಮೀರಲಾರದ ಮನಸ್ಥಿತಿ ಇಲ್ಲಿ ಸಜೀವ ಚಿತ್ರವಾಗಿ ರೂಪುಗೊಂಡಿದೆ. ಆಸೆ ಮತ್ತು ಆಯುಷ್ಯಗಳ ನಡುವೆ ಚಾಚಿಕೊಂಡಿರುವ ಮನುಷ್ಯನ ಕ್ರೌರ್ಯವನ್ನು ಒರೆಗೆ ಹಚ್ಚುವ ಈ ಕವಿತೆ ತನ್ನ ಎಲ್ಲಾ ಸಾಲುಗಳಲ್ಲೂ ವಿಷಾದದ ಜೊತೆಗೆ ವಿವೇಕವನ್ನೂ , ವಿವೇಕದ ಜೊತೆಗೆ ವ್ಯಂಗ್ಯವನ್ನೂ , ವ್ಯಂಗ್ಯದ ಜೊತೆಗೆ ವ್ಯಕ್ತಿತ್ವದ ಅವನತಿಯನ್ನು ರೂಪಕಗೊಳಿಸುವ ಬಗೆ ಅಪೂರ್ವವಾಗಿ ಮೂಡಿ ಬಂದಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುರುಹೇ ಬಯಲು
ಕುರುಹೇ ಬಯಲು
February 16, 2026
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
September 6, 2023
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ದೇಹ ದೇವಾಲಯ
ದೇಹ ದೇವಾಲಯ
June 12, 2025
Copyright © 2026 Bayalu