Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
Copyright © 2026 Bayalu