Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
Copyright © 2026 Bayalu