Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ದಡ ಸೋಂಕದ ಅಲೆಗಳು
Share:
Poems

ದಡ ಸೋಂಕದ ಅಲೆಗಳು

July 10, 2025 ಜ್ಯೋತಿಲಿಂಗಪ್ಪ
ನದಿ ಕೂಡುವ ಕಡಲ ಅಂಚು ನಿಂತು ಸಂಬಂಧ ಹುಡುಕುತಿರುವೆ ಕಡಲ ಸೇರುವ ನೀರು ನದಿ ಯಾವುದು ಕಡಲು ಯಾವುದು ಸಂಬಂಧ ಅಸಂಬಂಧ ಎರಡೆಂಬ ಭಿನ್ನ ಅಳಿಯದೇ.. ದಾರಿ ತೋರುವ ಕೈಯ ಹಿಡಿದಿರುವೆ...
ಅನಿಶಾ…
Share:
Poems

ಅನಿಶಾ…

September 6, 2026 ಜ್ಯೋತಿಲಿಂಗಪ್ಪ
ನಾನು ನಡೆದಷ್ಟೇ ನನ್ನ ದಾರಿ ಹಾಕಿದ ಹೆಜ್ಜೆಗೆ ದೂರ ಅಂಜಿಕೆಯೇ ಗುರಿ ಇಲ್ಲದ ಪಯಣಕೆ ದಿಕ್ಕಿಲ್ಲ ದಿಕ್ಕು ನೋಡಿ ಹರಿದೀತೇ ಬೆಳಕು ಈ ದಿಕ್ಕಿಗೆ ಹೆಸರಿಟ್ಟವನು ನಾನಲ್ಲವೇ ಒಂದು...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
Copyright © 2026 Bayalu