Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ಕಾಯೋ ಗುರುವೇ…
Share:
Poems

ಕಾಯೋ ಗುರುವೇ…

February 11, 2022 ಕೆ.ಆರ್ ಮಂಗಳಾ
ನಾನು: ಗಾಳಿಯೇ ಆಡದ, ಕತ್ತಲ ಕೋಣ್ಯಾಗ ಕಳೆದು ಹೋಗಿನಿ ನನ ಗುರುವೆ ಚಿಲಕವ ಸರಿಸಿ, ಬಾಗಿಲು ತೆಗೆದು ಬೆಳಕಾ ತೋರಿಸು ನನ ಗುರುವೆ ತಡವುತ ಎಡವುತ, ಅಲ್ಲಲ್ಲೇ ಸುತ್ತುತ ಹೈರಾಣಾಗಿಹೆ...
ಹೆಸರಿಲ್ಲದಾ ಊರಿನ ಹಾಡು
Share:
Poems

ಹೆಸರಿಲ್ಲದಾ ಊರಿನ ಹಾಡು

May 6, 2020 ಪದ್ಮಾಲಯ ನಾಗರಾಜ್
ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ// ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ ಶೋಕಿ ದಾರಿಯು...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
ಕುರುಹೇ ಬಯಲು
ಕುರುಹೇ ಬಯಲು
February 16, 2026
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
Copyright © 2026 Bayalu