Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಪೊರೆವ ದನಿ…
ಪೊರೆವ ದನಿ…
August 11, 2025
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
Copyright © 2026 Bayalu