Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೊಳಗಣ ಮರೀಚಿಕೆ
Share:
Poems February 5, 2020 ಪದ್ಮಾಲಯ ನಾಗರಾಜ್

ನನ್ನೊಳಗಣ ಮರೀಚಿಕೆ

ಈ ಊರು
ನದಿದಡೆಯಲ್ಲಿನ
ಪ್ರವಾಹ ಭೀತಿಯ ಅಭದ್ರತೆ…

ಈ ಊರು
ಛಿದ್ರ ವಿಛಿದ್ರಗಳ ಸಂಗಮ ಬಿಂದು…

ಈ ಊರು
ಪ್ರತಿಮಾ ವಿಧಾನದ ಭಾವಸುಧೆ…

ಈ ಊರು
ವಿಷಾದ, ವ್ಯಸನಗಳ ನದೀ ಸುಳಿ…

ಈ ಊರು
ಸುಖದ ಸಂಗ್ರಹಣೆಗಳ ದಗಲ್ಬಾಜಿ…

ಈ ಊರು
ಸ್ನೇಹ ಪ್ರೀತಿಗಳ ತೂಗು ತಕ್ಕಡಿ…

ಈ ಊರು
ವಾಸ್ತವ ಅರಿಯದಾ ದರ್ಶನ…

ಈ ಊರು
ಗತ ಚರಿತೆಗಳ ಅನುಶಾಸನ…

ಈ ಊರು
ಅಗಣಿತ ಕಲೆಗಳ ಅಂಗಳ…

ಈ ಊರು
ನೀತಿಪಾಠಗಳ ತವರೂರು..

ಈ ಊರಿಗೆ
ಅವನೀತಿ ಸೃಜಿಸಲು ಶಾಲೆ ಬೇಕಿಲ್ಲ…

ಈ ಊರು
ತನಗೆ ತನ್ನದೇ ಸೃಜಿಸುತ್ತಿದೆ…

ಈ ಊರು
ತನ್ನನ್ನು ತಾನೇ ಕೊಳ್ಳೆಹೊಡೆಯುತ್ತಿದೆ…

ಈ ಊರು
ತನ್ನೊಳು ತಾನೇ ಕೊಳೆಯುತ್ತಿದೆ…

ಈ ಊರು
ಪರಂಪರಾ ರಚನೆಗಳ ಊಳಿಗ…

ಈ ಊರು
ಕೈಗೆಟುಕದಾ ಕನಸು…

ಈ ಊರು
ಎಂದಾದರೂ ಉರುಳಿ ಹೋಗುವ ಬಡಪಾಯಿ…

ಈ ಊರು
ಸದಾ ಬೆಂಬಿಡದ ಮರೀಚಿಕೆ

ಈ ಊರು
ಕಡುಖಾಲಿಯಾದ ಮಹಮೌನ…

ಈ ಊರು
ಎಂದೂ ಖಾಲಿಯಾಗದಾ ನಶ್ವರ…

ಈ ಊರು
ಯಾರೂ ಯೋಚಿಸದಾ
ಸಮೃದ್ಧ ಬಯಲವನಾ…

ಈ ಊರು
ಏನೂ ಇಲ್ಲದ ನಿರಂತರ…

ಈ ಊರು
ಏನೂ ಅಲ್ಲವೆನಲೂ
ಇಲ್ಲವಾದ ಕಡು ನಿರುತ್ತರಾ.

Previous post ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
Next post ಶರಣ- ಎಂದರೆ…
ಶರಣ- ಎಂದರೆ…

Related Posts

ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...
ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...

Comments 2

  1. ಶ್ರೀಶೈಲ, ಗದಗ
    Feb 6, 2020 Reply

    ಒಳಗಿರುವ ಮರೀಚಿಕೆ ಯಾವುದು? ಆತ್ಮವೇ? ಮನಸ್ಸೇ? ಮಾಯೆಯೆ?

  2. Lingaraj Patil
    Feb 9, 2020 Reply

    ನಾಗರಾಜ ಸರ್, ದಯವಿಟ್ಟು ನೀವು ಲೇಖನಗಳನ್ನು ಬರೆಯಿರಿ, ನಿಮ್ಮ ವಿಚಾರಗಳಲ್ಲಿ ನವ ಮಾರ್ಗದ ಸೂಚನೆಗಳಿವೆ. ಅರ್ಥೈಸಿಕೊಳ್ಳಲು ತುಸು ಬಿಗಿಯೆನಿಸಿದರೂ ನನಗೆ ಅವು ಬಹಳ ಹಿಡಿಸಿವೆ. ಬಹಳ ತಿಂಗಳಾದವು, ನೀವು ಲೇಖನ ಬರೆಯದೆ, ನನ್ನ ಕೋರಿಕೆಯನ್ನು ಮನ್ನಿಸುವಿರೆಂದು ಭಾವಿಸುತ್ತೇನೆ.
    ನನ್ನ ಬುದ್ಧ ಕವನ ಸೊಗಸಾಗಿತ್ತು. ನನ್ನ ಊರು, ನನ್ನೊಳಗಿನ ವ್ಯಾಪಾರದಂತಿದೆ.

Leave a Reply to Lingaraj Patil Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಹಾಯ್ಕುಗಳು
ಹಾಯ್ಕುಗಳು
November 10, 2022
ನಾನು ಯಾರು?
ನಾನು ಯಾರು?
December 8, 2021
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
April 6, 2023
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
Copyright © 2026 Bayalu