Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಸನಾತನ ಧರ್ಮ
ಸನಾತನ ಧರ್ಮ
October 10, 2023
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ಮಹಾನುಭಾವಿ ಆದಯ್ಯ
ಮಹಾನುಭಾವಿ ಆದಯ್ಯ
April 29, 2018
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ಗಂಟಿನ ನಂಟು
ಗಂಟಿನ ನಂಟು
November 7, 2020
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
Copyright © 2025 Bayalu