Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ನೆಲದ ನಿಧಾನ
ನೆಲದ ನಿಧಾನ
April 29, 2018
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಹಾಯ್ಕುಗಳು
ಹಾಯ್ಕುಗಳು
November 10, 2022
ಮನವೇ ಮನವೇ…
ಮನವೇ ಮನವೇ…
May 6, 2020
Copyright © 2026 Bayalu