Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ-ನಿನ್ನ ನಡುವೆ
Share:
Poems June 5, 2021 ಕೆ.ಆರ್ ಮಂಗಳಾ

ನನ್ನ-ನಿನ್ನ ನಡುವೆ

ನನ್ನ-ನಿನ್ನ ನಡುವೆ
ಗೋಡೆ ಎಬ್ಬಿಸಿದವರಾರು
ಪರದೆ ಬಿಟ್ಟವರಾರು?
ಕತ್ತಲು ತುಂಬಿದವರಾರು?
ಮಂಜು ಕವಿಸಿದವರಾರು?
ನಿನ್ನಿಂದ ನನ್ನ ದೂರ ಮಾಡಿದವರಾರು?

ನನ್ನ-ನಿನ್ನ ನಡುವೆ
ಕಂದ ತೋಡಿದವರಾರು
ಕೋಟೆ ಕಟ್ಟಿದವರಾರು
ಗಡಿಯ ಕೊರೆದವರಾರು
ನಿನ್ನಿರುವ ಮರೆವಂತೆ
ಮಂಪರು ಕವಿಸಿದವರಾರು?

ಅರಿವು-ಮರೆವಿನಾಟದಲಿ
ಕಳೆದು ಹೋಯಿತೆ ಕೊಂಡಿ
ಮರೆವು ಮತಿಯನು ನುಂಗಿ
ಅರಿವು ತಿಳಿವನು ನುಂಗಿ
ಅರಸುತ್ತಾ ಅಲೆಯುತ್ತಾ
ಗುರು ಬಾಗಿಲಾ ತಟ್ಟಿ
ಮೊರೆಯಿಟ್ಟಿತು ಜೀವ
ತನ್ನ ತಾ ಕಾಣಲಿಕೆ
ದಾರಿ ತೋರೆಂದು.

Previous post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
Next post ನಾನು… ನನ್ನದು
ನಾನು… ನನ್ನದು

Related Posts

ನಡೆಯ ಎಡೆ…
Share:
Poems

ನಡೆಯ ಎಡೆ…

April 5, 2026 ಕೆ.ಆರ್ ಮಂಗಳಾ
ಅತ್ತಿದ್ದು ನಕ್ಕಿದ್ದು ಒಳಗೊಳಗೇ ಬಿಕ್ಕಿದ್ದು ಮತ್ತೆ ಜಂಜಡಕೆ ಬೀಳಲಾರೆ ಇನ್ನು ಎಲ್ಲ ಕಲಿಸುವ ಬದುಕು ಎಲ್ಲ ತಿಳಿಸುವ ಗುರುವು ದಾಟಬಲ್ಲೆನು ಈಜಿ ನೂರು ಕಡಲು ಸುಖ-ದುಃಖ ಬರಹವನು...
ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...

Comments 1

  1. Kallappa Banave
    Jun 12, 2021 Reply

    ಕವನ ಬಹಳ ಚನ್ನಾಗಿದೆ ಅಕ್ಕಾ, ಯಾವ ಗುರುವಿನ ಕದ ತಟ್ಟಿದಿರಿ ಎಂದು ತಿಳಿಯಬಹುದೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ಶಿವಾಚಾರ
ಶಿವಾಚಾರ
April 9, 2021
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಶಾಂತಿ
ಶಾಂತಿ
April 11, 2025
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
Copyright © 2026 Bayalu