Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಬುದ್ಧ ಮಹಾಗುರು
Share:
Poems January 4, 2020 ಪದ್ಮಾಲಯ ನಾಗರಾಜ್

ನನ್ನ ಬುದ್ಧ ಮಹಾಗುರು

ನನ್ನ ಬುದ್ಧ ಮಹಾಗುರುವು…
ಧರ್ಮವಲ್ಲ ದೈವವಲ್ಲ
ನುಡಿಯಲ್ಲ ಪಡಿಯಲ್ಲ
ವಿಗ್ರಹವಲ್ಲ ಅನುಗ್ರಹವಲ್ಲ
ಸಂಭ್ರಮವಲ್ಲ ಉತ್ಸವವಲ್ಲ
ಸುಖವಲ್ಲ ದುಃಖವಲ್ಲ
ವಾದವಲ್ಲ ಬೇಧವಲ್ಲ
ಮಂತ್ರವಲ್ಲ ತಂತ್ರವಲ್ಲ
ಮಾನಾವಮಾನ ಅಲ್ಲವೇ ಅಲ್ಲ!

ನನ್ನ ಬುದ್ಧ ಮಹಾಗುರುವೆಂದರೆ
ಕಥೆಯಲ್ಲ ವ್ಯಥೆಯಲ್ಲ
ಜಾತಿಯಲ್ಲ ಜ್ಯೋತಿಯಲ್ಲ
ಬೆಡಗಲ್ಲ ಬೆರಗಲ್ಲ
ಜನುಮವಲ್ಲ ಜರೆಯಲ್ಲ
ಕೋಪವಲ್ಲ ತಾಪವಲ್ಲ
ರೂಪವಲ್ಲ ನೋಟವಲ್ಲ
ಅನ್ಯವಲ್ಲ ಅನನ್ಯವಲ್ಲ
ಧ್ಯಾನವಲ್ಲ ಧಾತನಲ್ಲ
ಅವ ಲೋಕಪರ ನಿರಂತರ…
ನನ್ನ ಬುದ್ಧಮಹಾಗುರುವು…

ಅಲ್ಲಮನ ಅಲ್ಲಗಳಲಿ
ಬಸವಣ್ಣನ ತಾಯ್ಗರುಳ ಸಂಬಂಧದಲಿ
ವೇಮನನ ವಿಮಲ ಪ್ರಜ್ಞೆಯಲಿ
ಸೂಫಿಗಳ ನಡೆಸಾರದಲಿ
ಕಬೀರನ ಕರೆಗಳಲಿ
ತಾವೋನ ತಾವಲ್ಲದ ತಾವಿನಲಿ
ಮಂಟೇದಯ್ಯನ ನೀಲಿ ಗ್ಯಾನದಲಿ
ಬಾಬಾಸಾಹೇಬರ ಮಹಾಕರುಣೆಯಲಿ
ಸದಾ ಎಚ್ಚರದಿ ಎಚ್ಚೆತ್ತುಕೊಂಡಿಹನು!!!

ಆದರೆ…
ತಪ್ಪು ನುಡಿವ ಕರ್ಮಿಯಾಗಿಹ
ಜಾತಿಬಿಡದ ನೀಚನಾಗಿಹ
ಸಂಗ್ರಹೇಚ್ಚೆಗೆ ಜಾರಿಕೊಂಡಿಹ
ನಾ ಮೇಲೆನುವ ಮದಾಂಧನಾಗಿಹ
ನನ್ನ ನಾ ಕಲ್ಪಿಸಿಕೊಳ್ಳುತ್ತಿರುವ
ನನ್ನ ನಾ ಸುಖಿಸುತ್ತಿರುವ
ನನ್ನೊಳು ನಾ ಚದುರಿಹೋಗಿರುವ
ನನ್ನೊಳು ಹುಡುಕಲು ಆತ ಎಲ್ಲಿಹನು?

Previous post ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
Next post ಗುರುಪಥ
ಗುರುಪಥ

Related Posts

ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...
ಮೊಟ್ಟೆ- ಗೂಡು
Share:
Poems

ಮೊಟ್ಟೆ- ಗೂಡು

April 11, 2025 ಜ್ಯೋತಿಲಿಂಗಪ್ಪ
ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...

Comments 6

  1. Mahantesh Mysuru
    Jan 6, 2020 Reply

    ಬುದ್ದ ಮಹಾಗುರು ಕವನ ತುಂಬಾ ಚನ್ನಾಗಿದೆ. ಮತ್ತೆ ಮತ್ತೆ ಮನನ ಮಾಡುವಂತಿದೆ. ರೂಪವಲ್ಲ ನೋಟವಲ್ಲ, ಅನ್ಯವಲ್ಲ ಅನನ್ಯವಲ್ಲ, ಧ್ಯಾನವಲ್ಲ ಧಾತನಲ್ಲ… ಸಾಲುಗಳು ಬಹಳ ಸೊಗಸಾಗಿವೆ.

  2. ಶಿವಕುಮಾರ್ ಸಾಲಿ
    Jan 8, 2020 Reply

    ಬುದ್ದನಂತಹ ಜ್ಞಾನಿಯನ್ನು ನಿಜಕ್ಕೂ ಎಲ್ಲೆಲ್ಲಿ ಕಾಣಬೇಕೆಂದು ಸೂಚಿಸಿದ ಶರಣ ನಾಗರಾಜವರಿಗೆ ವಂದನೆಗಳು

  3. Chetan M.P
    Jan 9, 2020 Reply

    ಕವನದ ಒಂದೊಂದು ಪದವೂ ಮನನಯೋಗ್ಯ

  4. Dinesh P
    Jan 14, 2020 Reply

    ಬುದ್ಧನನ್ನ ಬದುಕಿನಲ್ಲಿ ಕಾಣುವ ಸುಂದರ ಪರಿಕಲ್ಪನೆ.

  5. Jayaraj Bidar
    Jan 16, 2020 Reply

    ಬುದ್ದನನ್ನು ಎಲ್ಲಿ, ಹೇಗೆ ಹುಡುಕಿಕೊಳ್ಳಬೇಕೆಂದು ಗೊತ್ತಾಯಿತು. ಬುದ್ದನ ಜಾಗದಲ್ಲಿ ಬಸವನ ಹೆಸರು ಹಾಕಿದರೂ ಕವನಕ್ಕೆ ಚ್ಯುತಿ ಬರುವುದಿಲ್ಲ. ಮಹಾತ್ಮರನ್ನು ಹೀಗೇ ಹುಡುಕಿಕೊಳ್ಳಬೇಕು.

  6. Chinmayi
    May 15, 2021 Reply

    ಬುದ್ದ ಬುದ್ದನಿಗೇ ಸರಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಶಾಂತಿ
ಶಾಂತಿ
April 11, 2025
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ಒಳಗಣ ಮರ
ಒಳಗಣ ಮರ
March 12, 2022
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಹಣತೆ ಸಾಕು
ಹಣತೆ ಸಾಕು
September 14, 2024
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
Copyright © 2026 Bayalu