Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಬುದ್ಧ ಮಹಾಗುರು
Share:
Poems January 4, 2020 ಪದ್ಮಾಲಯ ನಾಗರಾಜ್

ನನ್ನ ಬುದ್ಧ ಮಹಾಗುರು

ನನ್ನ ಬುದ್ಧ ಮಹಾಗುರುವು…
ಧರ್ಮವಲ್ಲ ದೈವವಲ್ಲ
ನುಡಿಯಲ್ಲ ಪಡಿಯಲ್ಲ
ವಿಗ್ರಹವಲ್ಲ ಅನುಗ್ರಹವಲ್ಲ
ಸಂಭ್ರಮವಲ್ಲ ಉತ್ಸವವಲ್ಲ
ಸುಖವಲ್ಲ ದುಃಖವಲ್ಲ
ವಾದವಲ್ಲ ಬೇಧವಲ್ಲ
ಮಂತ್ರವಲ್ಲ ತಂತ್ರವಲ್ಲ
ಮಾನಾವಮಾನ ಅಲ್ಲವೇ ಅಲ್ಲ!

ನನ್ನ ಬುದ್ಧ ಮಹಾಗುರುವೆಂದರೆ
ಕಥೆಯಲ್ಲ ವ್ಯಥೆಯಲ್ಲ
ಜಾತಿಯಲ್ಲ ಜ್ಯೋತಿಯಲ್ಲ
ಬೆಡಗಲ್ಲ ಬೆರಗಲ್ಲ
ಜನುಮವಲ್ಲ ಜರೆಯಲ್ಲ
ಕೋಪವಲ್ಲ ತಾಪವಲ್ಲ
ರೂಪವಲ್ಲ ನೋಟವಲ್ಲ
ಅನ್ಯವಲ್ಲ ಅನನ್ಯವಲ್ಲ
ಧ್ಯಾನವಲ್ಲ ಧಾತನಲ್ಲ
ಅವ ಲೋಕಪರ ನಿರಂತರ…
ನನ್ನ ಬುದ್ಧಮಹಾಗುರುವು…

ಅಲ್ಲಮನ ಅಲ್ಲಗಳಲಿ
ಬಸವಣ್ಣನ ತಾಯ್ಗರುಳ ಸಂಬಂಧದಲಿ
ವೇಮನನ ವಿಮಲ ಪ್ರಜ್ಞೆಯಲಿ
ಸೂಫಿಗಳ ನಡೆಸಾರದಲಿ
ಕಬೀರನ ಕರೆಗಳಲಿ
ತಾವೋನ ತಾವಲ್ಲದ ತಾವಿನಲಿ
ಮಂಟೇದಯ್ಯನ ನೀಲಿ ಗ್ಯಾನದಲಿ
ಬಾಬಾಸಾಹೇಬರ ಮಹಾಕರುಣೆಯಲಿ
ಸದಾ ಎಚ್ಚರದಿ ಎಚ್ಚೆತ್ತುಕೊಂಡಿಹನು!!!

ಆದರೆ…
ತಪ್ಪು ನುಡಿವ ಕರ್ಮಿಯಾಗಿಹ
ಜಾತಿಬಿಡದ ನೀಚನಾಗಿಹ
ಸಂಗ್ರಹೇಚ್ಚೆಗೆ ಜಾರಿಕೊಂಡಿಹ
ನಾ ಮೇಲೆನುವ ಮದಾಂಧನಾಗಿಹ
ನನ್ನ ನಾ ಕಲ್ಪಿಸಿಕೊಳ್ಳುತ್ತಿರುವ
ನನ್ನ ನಾ ಸುಖಿಸುತ್ತಿರುವ
ನನ್ನೊಳು ನಾ ಚದುರಿಹೋಗಿರುವ
ನನ್ನೊಳು ಹುಡುಕಲು ಆತ ಎಲ್ಲಿಹನು?

Previous post ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
Next post ಗುರುಪಥ
ಗುರುಪಥ

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...

Comments 6

  1. Mahantesh Mysuru
    Jan 6, 2020 Reply

    ಬುದ್ದ ಮಹಾಗುರು ಕವನ ತುಂಬಾ ಚನ್ನಾಗಿದೆ. ಮತ್ತೆ ಮತ್ತೆ ಮನನ ಮಾಡುವಂತಿದೆ. ರೂಪವಲ್ಲ ನೋಟವಲ್ಲ, ಅನ್ಯವಲ್ಲ ಅನನ್ಯವಲ್ಲ, ಧ್ಯಾನವಲ್ಲ ಧಾತನಲ್ಲ… ಸಾಲುಗಳು ಬಹಳ ಸೊಗಸಾಗಿವೆ.

  2. ಶಿವಕುಮಾರ್ ಸಾಲಿ
    Jan 8, 2020 Reply

    ಬುದ್ದನಂತಹ ಜ್ಞಾನಿಯನ್ನು ನಿಜಕ್ಕೂ ಎಲ್ಲೆಲ್ಲಿ ಕಾಣಬೇಕೆಂದು ಸೂಚಿಸಿದ ಶರಣ ನಾಗರಾಜವರಿಗೆ ವಂದನೆಗಳು

  3. Chetan M.P
    Jan 9, 2020 Reply

    ಕವನದ ಒಂದೊಂದು ಪದವೂ ಮನನಯೋಗ್ಯ

  4. Dinesh P
    Jan 14, 2020 Reply

    ಬುದ್ಧನನ್ನ ಬದುಕಿನಲ್ಲಿ ಕಾಣುವ ಸುಂದರ ಪರಿಕಲ್ಪನೆ.

  5. Jayaraj Bidar
    Jan 16, 2020 Reply

    ಬುದ್ದನನ್ನು ಎಲ್ಲಿ, ಹೇಗೆ ಹುಡುಕಿಕೊಳ್ಳಬೇಕೆಂದು ಗೊತ್ತಾಯಿತು. ಬುದ್ದನ ಜಾಗದಲ್ಲಿ ಬಸವನ ಹೆಸರು ಹಾಕಿದರೂ ಕವನಕ್ಕೆ ಚ್ಯುತಿ ಬರುವುದಿಲ್ಲ. ಮಹಾತ್ಮರನ್ನು ಹೀಗೇ ಹುಡುಕಿಕೊಳ್ಳಬೇಕು.

  6. Chinmayi
    May 15, 2021 Reply

    ಬುದ್ದ ಬುದ್ದನಿಗೇ ಸರಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಹುಡುಕಾಟ
ಹುಡುಕಾಟ
January 15, 2026
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಅನುಭವ ಮಂಟಪ: ಮುಂದೇನು?
ಅನುಭವ ಮಂಟಪ: ಮುಂದೇನು?
April 5, 2026
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
Copyright © 2026 Bayalu