Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಬುದ್ಧ ಮಹಾಗುರು
Share:
Poems January 4, 2020 ಪದ್ಮಾಲಯ ನಾಗರಾಜ್

ನನ್ನ ಬುದ್ಧ ಮಹಾಗುರು

ನನ್ನ ಬುದ್ಧ ಮಹಾಗುರುವು…
ಧರ್ಮವಲ್ಲ ದೈವವಲ್ಲ
ನುಡಿಯಲ್ಲ ಪಡಿಯಲ್ಲ
ವಿಗ್ರಹವಲ್ಲ ಅನುಗ್ರಹವಲ್ಲ
ಸಂಭ್ರಮವಲ್ಲ ಉತ್ಸವವಲ್ಲ
ಸುಖವಲ್ಲ ದುಃಖವಲ್ಲ
ವಾದವಲ್ಲ ಬೇಧವಲ್ಲ
ಮಂತ್ರವಲ್ಲ ತಂತ್ರವಲ್ಲ
ಮಾನಾವಮಾನ ಅಲ್ಲವೇ ಅಲ್ಲ!

ನನ್ನ ಬುದ್ಧ ಮಹಾಗುರುವೆಂದರೆ
ಕಥೆಯಲ್ಲ ವ್ಯಥೆಯಲ್ಲ
ಜಾತಿಯಲ್ಲ ಜ್ಯೋತಿಯಲ್ಲ
ಬೆಡಗಲ್ಲ ಬೆರಗಲ್ಲ
ಜನುಮವಲ್ಲ ಜರೆಯಲ್ಲ
ಕೋಪವಲ್ಲ ತಾಪವಲ್ಲ
ರೂಪವಲ್ಲ ನೋಟವಲ್ಲ
ಅನ್ಯವಲ್ಲ ಅನನ್ಯವಲ್ಲ
ಧ್ಯಾನವಲ್ಲ ಧಾತನಲ್ಲ
ಅವ ಲೋಕಪರ ನಿರಂತರ…
ನನ್ನ ಬುದ್ಧಮಹಾಗುರುವು…

ಅಲ್ಲಮನ ಅಲ್ಲಗಳಲಿ
ಬಸವಣ್ಣನ ತಾಯ್ಗರುಳ ಸಂಬಂಧದಲಿ
ವೇಮನನ ವಿಮಲ ಪ್ರಜ್ಞೆಯಲಿ
ಸೂಫಿಗಳ ನಡೆಸಾರದಲಿ
ಕಬೀರನ ಕರೆಗಳಲಿ
ತಾವೋನ ತಾವಲ್ಲದ ತಾವಿನಲಿ
ಮಂಟೇದಯ್ಯನ ನೀಲಿ ಗ್ಯಾನದಲಿ
ಬಾಬಾಸಾಹೇಬರ ಮಹಾಕರುಣೆಯಲಿ
ಸದಾ ಎಚ್ಚರದಿ ಎಚ್ಚೆತ್ತುಕೊಂಡಿಹನು!!!

ಆದರೆ…
ತಪ್ಪು ನುಡಿವ ಕರ್ಮಿಯಾಗಿಹ
ಜಾತಿಬಿಡದ ನೀಚನಾಗಿಹ
ಸಂಗ್ರಹೇಚ್ಚೆಗೆ ಜಾರಿಕೊಂಡಿಹ
ನಾ ಮೇಲೆನುವ ಮದಾಂಧನಾಗಿಹ
ನನ್ನ ನಾ ಕಲ್ಪಿಸಿಕೊಳ್ಳುತ್ತಿರುವ
ನನ್ನ ನಾ ಸುಖಿಸುತ್ತಿರುವ
ನನ್ನೊಳು ನಾ ಚದುರಿಹೋಗಿರುವ
ನನ್ನೊಳು ಹುಡುಕಲು ಆತ ಎಲ್ಲಿಹನು?

Previous post ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
Next post ಗುರುಪಥ
ಗುರುಪಥ

Related Posts

ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...
ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...

Comments 6

  1. Mahantesh Mysuru
    Jan 6, 2020 Reply

    ಬುದ್ದ ಮಹಾಗುರು ಕವನ ತುಂಬಾ ಚನ್ನಾಗಿದೆ. ಮತ್ತೆ ಮತ್ತೆ ಮನನ ಮಾಡುವಂತಿದೆ. ರೂಪವಲ್ಲ ನೋಟವಲ್ಲ, ಅನ್ಯವಲ್ಲ ಅನನ್ಯವಲ್ಲ, ಧ್ಯಾನವಲ್ಲ ಧಾತನಲ್ಲ… ಸಾಲುಗಳು ಬಹಳ ಸೊಗಸಾಗಿವೆ.

  2. ಶಿವಕುಮಾರ್ ಸಾಲಿ
    Jan 8, 2020 Reply

    ಬುದ್ದನಂತಹ ಜ್ಞಾನಿಯನ್ನು ನಿಜಕ್ಕೂ ಎಲ್ಲೆಲ್ಲಿ ಕಾಣಬೇಕೆಂದು ಸೂಚಿಸಿದ ಶರಣ ನಾಗರಾಜವರಿಗೆ ವಂದನೆಗಳು

  3. Chetan M.P
    Jan 9, 2020 Reply

    ಕವನದ ಒಂದೊಂದು ಪದವೂ ಮನನಯೋಗ್ಯ

  4. Dinesh P
    Jan 14, 2020 Reply

    ಬುದ್ಧನನ್ನ ಬದುಕಿನಲ್ಲಿ ಕಾಣುವ ಸುಂದರ ಪರಿಕಲ್ಪನೆ.

  5. Jayaraj Bidar
    Jan 16, 2020 Reply

    ಬುದ್ದನನ್ನು ಎಲ್ಲಿ, ಹೇಗೆ ಹುಡುಕಿಕೊಳ್ಳಬೇಕೆಂದು ಗೊತ್ತಾಯಿತು. ಬುದ್ದನ ಜಾಗದಲ್ಲಿ ಬಸವನ ಹೆಸರು ಹಾಕಿದರೂ ಕವನಕ್ಕೆ ಚ್ಯುತಿ ಬರುವುದಿಲ್ಲ. ಮಹಾತ್ಮರನ್ನು ಹೀಗೇ ಹುಡುಕಿಕೊಳ್ಳಬೇಕು.

  6. Chinmayi
    May 15, 2021 Reply

    ಬುದ್ದ ಬುದ್ದನಿಗೇ ಸರಿ

Leave a Reply to ಶಿವಕುಮಾರ್ ಸಾಲಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಆಸರೆ
ಆಸರೆ
August 6, 2022
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ನಾನು  ಬಿಂಬ
ನಾನು ಬಿಂಬ
September 13, 2025
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
Copyright © 2025 Bayalu