Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಬುದ್ಧ ಮಹಾಗುರು
Share:
Poems January 4, 2020 ಪದ್ಮಾಲಯ ನಾಗರಾಜ್

ನನ್ನ ಬುದ್ಧ ಮಹಾಗುರು

ನನ್ನ ಬುದ್ಧ ಮಹಾಗುರುವು…
ಧರ್ಮವಲ್ಲ ದೈವವಲ್ಲ
ನುಡಿಯಲ್ಲ ಪಡಿಯಲ್ಲ
ವಿಗ್ರಹವಲ್ಲ ಅನುಗ್ರಹವಲ್ಲ
ಸಂಭ್ರಮವಲ್ಲ ಉತ್ಸವವಲ್ಲ
ಸುಖವಲ್ಲ ದುಃಖವಲ್ಲ
ವಾದವಲ್ಲ ಬೇಧವಲ್ಲ
ಮಂತ್ರವಲ್ಲ ತಂತ್ರವಲ್ಲ
ಮಾನಾವಮಾನ ಅಲ್ಲವೇ ಅಲ್ಲ!

ನನ್ನ ಬುದ್ಧ ಮಹಾಗುರುವೆಂದರೆ
ಕಥೆಯಲ್ಲ ವ್ಯಥೆಯಲ್ಲ
ಜಾತಿಯಲ್ಲ ಜ್ಯೋತಿಯಲ್ಲ
ಬೆಡಗಲ್ಲ ಬೆರಗಲ್ಲ
ಜನುಮವಲ್ಲ ಜರೆಯಲ್ಲ
ಕೋಪವಲ್ಲ ತಾಪವಲ್ಲ
ರೂಪವಲ್ಲ ನೋಟವಲ್ಲ
ಅನ್ಯವಲ್ಲ ಅನನ್ಯವಲ್ಲ
ಧ್ಯಾನವಲ್ಲ ಧಾತನಲ್ಲ
ಅವ ಲೋಕಪರ ನಿರಂತರ…
ನನ್ನ ಬುದ್ಧಮಹಾಗುರುವು…

ಅಲ್ಲಮನ ಅಲ್ಲಗಳಲಿ
ಬಸವಣ್ಣನ ತಾಯ್ಗರುಳ ಸಂಬಂಧದಲಿ
ವೇಮನನ ವಿಮಲ ಪ್ರಜ್ಞೆಯಲಿ
ಸೂಫಿಗಳ ನಡೆಸಾರದಲಿ
ಕಬೀರನ ಕರೆಗಳಲಿ
ತಾವೋನ ತಾವಲ್ಲದ ತಾವಿನಲಿ
ಮಂಟೇದಯ್ಯನ ನೀಲಿ ಗ್ಯಾನದಲಿ
ಬಾಬಾಸಾಹೇಬರ ಮಹಾಕರುಣೆಯಲಿ
ಸದಾ ಎಚ್ಚರದಿ ಎಚ್ಚೆತ್ತುಕೊಂಡಿಹನು!!!

ಆದರೆ…
ತಪ್ಪು ನುಡಿವ ಕರ್ಮಿಯಾಗಿಹ
ಜಾತಿಬಿಡದ ನೀಚನಾಗಿಹ
ಸಂಗ್ರಹೇಚ್ಚೆಗೆ ಜಾರಿಕೊಂಡಿಹ
ನಾ ಮೇಲೆನುವ ಮದಾಂಧನಾಗಿಹ
ನನ್ನ ನಾ ಕಲ್ಪಿಸಿಕೊಳ್ಳುತ್ತಿರುವ
ನನ್ನ ನಾ ಸುಖಿಸುತ್ತಿರುವ
ನನ್ನೊಳು ನಾ ಚದುರಿಹೋಗಿರುವ
ನನ್ನೊಳು ಹುಡುಕಲು ಆತ ಎಲ್ಲಿಹನು?

Previous post ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
Next post ಗುರುಪಥ
ಗುರುಪಥ

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Comments 6

  1. Mahantesh Mysuru
    Jan 6, 2020 Reply

    ಬುದ್ದ ಮಹಾಗುರು ಕವನ ತುಂಬಾ ಚನ್ನಾಗಿದೆ. ಮತ್ತೆ ಮತ್ತೆ ಮನನ ಮಾಡುವಂತಿದೆ. ರೂಪವಲ್ಲ ನೋಟವಲ್ಲ, ಅನ್ಯವಲ್ಲ ಅನನ್ಯವಲ್ಲ, ಧ್ಯಾನವಲ್ಲ ಧಾತನಲ್ಲ… ಸಾಲುಗಳು ಬಹಳ ಸೊಗಸಾಗಿವೆ.

  2. ಶಿವಕುಮಾರ್ ಸಾಲಿ
    Jan 8, 2020 Reply

    ಬುದ್ದನಂತಹ ಜ್ಞಾನಿಯನ್ನು ನಿಜಕ್ಕೂ ಎಲ್ಲೆಲ್ಲಿ ಕಾಣಬೇಕೆಂದು ಸೂಚಿಸಿದ ಶರಣ ನಾಗರಾಜವರಿಗೆ ವಂದನೆಗಳು

  3. Chetan M.P
    Jan 9, 2020 Reply

    ಕವನದ ಒಂದೊಂದು ಪದವೂ ಮನನಯೋಗ್ಯ

  4. Dinesh P
    Jan 14, 2020 Reply

    ಬುದ್ಧನನ್ನ ಬದುಕಿನಲ್ಲಿ ಕಾಣುವ ಸುಂದರ ಪರಿಕಲ್ಪನೆ.

  5. Jayaraj Bidar
    Jan 16, 2020 Reply

    ಬುದ್ದನನ್ನು ಎಲ್ಲಿ, ಹೇಗೆ ಹುಡುಕಿಕೊಳ್ಳಬೇಕೆಂದು ಗೊತ್ತಾಯಿತು. ಬುದ್ದನ ಜಾಗದಲ್ಲಿ ಬಸವನ ಹೆಸರು ಹಾಕಿದರೂ ಕವನಕ್ಕೆ ಚ್ಯುತಿ ಬರುವುದಿಲ್ಲ. ಮಹಾತ್ಮರನ್ನು ಹೀಗೇ ಹುಡುಕಿಕೊಳ್ಳಬೇಕು.

  6. Chinmayi
    May 15, 2021 Reply

    ಬುದ್ದ ಬುದ್ದನಿಗೇ ಸರಿ

Leave a Reply to ಶಿವಕುಮಾರ್ ಸಾಲಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
Copyright © 2025 Bayalu