Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಬುದ್ಧ ಮಹಾಗುರು
Share:
Poems January 4, 2020 ಪದ್ಮಾಲಯ ನಾಗರಾಜ್

ನನ್ನ ಬುದ್ಧ ಮಹಾಗುರು

ನನ್ನ ಬುದ್ಧ ಮಹಾಗುರುವು…
ಧರ್ಮವಲ್ಲ ದೈವವಲ್ಲ
ನುಡಿಯಲ್ಲ ಪಡಿಯಲ್ಲ
ವಿಗ್ರಹವಲ್ಲ ಅನುಗ್ರಹವಲ್ಲ
ಸಂಭ್ರಮವಲ್ಲ ಉತ್ಸವವಲ್ಲ
ಸುಖವಲ್ಲ ದುಃಖವಲ್ಲ
ವಾದವಲ್ಲ ಬೇಧವಲ್ಲ
ಮಂತ್ರವಲ್ಲ ತಂತ್ರವಲ್ಲ
ಮಾನಾವಮಾನ ಅಲ್ಲವೇ ಅಲ್ಲ!

ನನ್ನ ಬುದ್ಧ ಮಹಾಗುರುವೆಂದರೆ
ಕಥೆಯಲ್ಲ ವ್ಯಥೆಯಲ್ಲ
ಜಾತಿಯಲ್ಲ ಜ್ಯೋತಿಯಲ್ಲ
ಬೆಡಗಲ್ಲ ಬೆರಗಲ್ಲ
ಜನುಮವಲ್ಲ ಜರೆಯಲ್ಲ
ಕೋಪವಲ್ಲ ತಾಪವಲ್ಲ
ರೂಪವಲ್ಲ ನೋಟವಲ್ಲ
ಅನ್ಯವಲ್ಲ ಅನನ್ಯವಲ್ಲ
ಧ್ಯಾನವಲ್ಲ ಧಾತನಲ್ಲ
ಅವ ಲೋಕಪರ ನಿರಂತರ…
ನನ್ನ ಬುದ್ಧಮಹಾಗುರುವು…

ಅಲ್ಲಮನ ಅಲ್ಲಗಳಲಿ
ಬಸವಣ್ಣನ ತಾಯ್ಗರುಳ ಸಂಬಂಧದಲಿ
ವೇಮನನ ವಿಮಲ ಪ್ರಜ್ಞೆಯಲಿ
ಸೂಫಿಗಳ ನಡೆಸಾರದಲಿ
ಕಬೀರನ ಕರೆಗಳಲಿ
ತಾವೋನ ತಾವಲ್ಲದ ತಾವಿನಲಿ
ಮಂಟೇದಯ್ಯನ ನೀಲಿ ಗ್ಯಾನದಲಿ
ಬಾಬಾಸಾಹೇಬರ ಮಹಾಕರುಣೆಯಲಿ
ಸದಾ ಎಚ್ಚರದಿ ಎಚ್ಚೆತ್ತುಕೊಂಡಿಹನು!!!

ಆದರೆ…
ತಪ್ಪು ನುಡಿವ ಕರ್ಮಿಯಾಗಿಹ
ಜಾತಿಬಿಡದ ನೀಚನಾಗಿಹ
ಸಂಗ್ರಹೇಚ್ಚೆಗೆ ಜಾರಿಕೊಂಡಿಹ
ನಾ ಮೇಲೆನುವ ಮದಾಂಧನಾಗಿಹ
ನನ್ನ ನಾ ಕಲ್ಪಿಸಿಕೊಳ್ಳುತ್ತಿರುವ
ನನ್ನ ನಾ ಸುಖಿಸುತ್ತಿರುವ
ನನ್ನೊಳು ನಾ ಚದುರಿಹೋಗಿರುವ
ನನ್ನೊಳು ಹುಡುಕಲು ಆತ ಎಲ್ಲಿಹನು?

Previous post ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
Next post ಗುರುಪಥ
ಗುರುಪಥ

Related Posts

ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...
ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...

Comments 6

  1. Mahantesh Mysuru
    Jan 6, 2020 Reply

    ಬುದ್ದ ಮಹಾಗುರು ಕವನ ತುಂಬಾ ಚನ್ನಾಗಿದೆ. ಮತ್ತೆ ಮತ್ತೆ ಮನನ ಮಾಡುವಂತಿದೆ. ರೂಪವಲ್ಲ ನೋಟವಲ್ಲ, ಅನ್ಯವಲ್ಲ ಅನನ್ಯವಲ್ಲ, ಧ್ಯಾನವಲ್ಲ ಧಾತನಲ್ಲ… ಸಾಲುಗಳು ಬಹಳ ಸೊಗಸಾಗಿವೆ.

  2. ಶಿವಕುಮಾರ್ ಸಾಲಿ
    Jan 8, 2020 Reply

    ಬುದ್ದನಂತಹ ಜ್ಞಾನಿಯನ್ನು ನಿಜಕ್ಕೂ ಎಲ್ಲೆಲ್ಲಿ ಕಾಣಬೇಕೆಂದು ಸೂಚಿಸಿದ ಶರಣ ನಾಗರಾಜವರಿಗೆ ವಂದನೆಗಳು

  3. Chetan M.P
    Jan 9, 2020 Reply

    ಕವನದ ಒಂದೊಂದು ಪದವೂ ಮನನಯೋಗ್ಯ

  4. Dinesh P
    Jan 14, 2020 Reply

    ಬುದ್ಧನನ್ನ ಬದುಕಿನಲ್ಲಿ ಕಾಣುವ ಸುಂದರ ಪರಿಕಲ್ಪನೆ.

  5. Jayaraj Bidar
    Jan 16, 2020 Reply

    ಬುದ್ದನನ್ನು ಎಲ್ಲಿ, ಹೇಗೆ ಹುಡುಕಿಕೊಳ್ಳಬೇಕೆಂದು ಗೊತ್ತಾಯಿತು. ಬುದ್ದನ ಜಾಗದಲ್ಲಿ ಬಸವನ ಹೆಸರು ಹಾಕಿದರೂ ಕವನಕ್ಕೆ ಚ್ಯುತಿ ಬರುವುದಿಲ್ಲ. ಮಹಾತ್ಮರನ್ನು ಹೀಗೇ ಹುಡುಕಿಕೊಳ್ಳಬೇಕು.

  6. Chinmayi
    May 15, 2021 Reply

    ಬುದ್ದ ಬುದ್ದನಿಗೇ ಸರಿ

Leave a Reply to Jayaraj Bidar Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
Copyright © 2026 Bayalu