Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಬುದ್ಧ ಮಹಾಗುರು
Share:
Poems January 4, 2020 ಪದ್ಮಾಲಯ ನಾಗರಾಜ್

ನನ್ನ ಬುದ್ಧ ಮಹಾಗುರು

ನನ್ನ ಬುದ್ಧ ಮಹಾಗುರುವು…
ಧರ್ಮವಲ್ಲ ದೈವವಲ್ಲ
ನುಡಿಯಲ್ಲ ಪಡಿಯಲ್ಲ
ವಿಗ್ರಹವಲ್ಲ ಅನುಗ್ರಹವಲ್ಲ
ಸಂಭ್ರಮವಲ್ಲ ಉತ್ಸವವಲ್ಲ
ಸುಖವಲ್ಲ ದುಃಖವಲ್ಲ
ವಾದವಲ್ಲ ಬೇಧವಲ್ಲ
ಮಂತ್ರವಲ್ಲ ತಂತ್ರವಲ್ಲ
ಮಾನಾವಮಾನ ಅಲ್ಲವೇ ಅಲ್ಲ!

ನನ್ನ ಬುದ್ಧ ಮಹಾಗುರುವೆಂದರೆ
ಕಥೆಯಲ್ಲ ವ್ಯಥೆಯಲ್ಲ
ಜಾತಿಯಲ್ಲ ಜ್ಯೋತಿಯಲ್ಲ
ಬೆಡಗಲ್ಲ ಬೆರಗಲ್ಲ
ಜನುಮವಲ್ಲ ಜರೆಯಲ್ಲ
ಕೋಪವಲ್ಲ ತಾಪವಲ್ಲ
ರೂಪವಲ್ಲ ನೋಟವಲ್ಲ
ಅನ್ಯವಲ್ಲ ಅನನ್ಯವಲ್ಲ
ಧ್ಯಾನವಲ್ಲ ಧಾತನಲ್ಲ
ಅವ ಲೋಕಪರ ನಿರಂತರ…
ನನ್ನ ಬುದ್ಧಮಹಾಗುರುವು…

ಅಲ್ಲಮನ ಅಲ್ಲಗಳಲಿ
ಬಸವಣ್ಣನ ತಾಯ್ಗರುಳ ಸಂಬಂಧದಲಿ
ವೇಮನನ ವಿಮಲ ಪ್ರಜ್ಞೆಯಲಿ
ಸೂಫಿಗಳ ನಡೆಸಾರದಲಿ
ಕಬೀರನ ಕರೆಗಳಲಿ
ತಾವೋನ ತಾವಲ್ಲದ ತಾವಿನಲಿ
ಮಂಟೇದಯ್ಯನ ನೀಲಿ ಗ್ಯಾನದಲಿ
ಬಾಬಾಸಾಹೇಬರ ಮಹಾಕರುಣೆಯಲಿ
ಸದಾ ಎಚ್ಚರದಿ ಎಚ್ಚೆತ್ತುಕೊಂಡಿಹನು!!!

ಆದರೆ…
ತಪ್ಪು ನುಡಿವ ಕರ್ಮಿಯಾಗಿಹ
ಜಾತಿಬಿಡದ ನೀಚನಾಗಿಹ
ಸಂಗ್ರಹೇಚ್ಚೆಗೆ ಜಾರಿಕೊಂಡಿಹ
ನಾ ಮೇಲೆನುವ ಮದಾಂಧನಾಗಿಹ
ನನ್ನ ನಾ ಕಲ್ಪಿಸಿಕೊಳ್ಳುತ್ತಿರುವ
ನನ್ನ ನಾ ಸುಖಿಸುತ್ತಿರುವ
ನನ್ನೊಳು ನಾ ಚದುರಿಹೋಗಿರುವ
ನನ್ನೊಳು ಹುಡುಕಲು ಆತ ಎಲ್ಲಿಹನು?

Previous post ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
Next post ಗುರುಪಥ
ಗುರುಪಥ

Related Posts

ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...
ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...

Comments 6

  1. Mahantesh Mysuru
    Jan 6, 2020 Reply

    ಬುದ್ದ ಮಹಾಗುರು ಕವನ ತುಂಬಾ ಚನ್ನಾಗಿದೆ. ಮತ್ತೆ ಮತ್ತೆ ಮನನ ಮಾಡುವಂತಿದೆ. ರೂಪವಲ್ಲ ನೋಟವಲ್ಲ, ಅನ್ಯವಲ್ಲ ಅನನ್ಯವಲ್ಲ, ಧ್ಯಾನವಲ್ಲ ಧಾತನಲ್ಲ… ಸಾಲುಗಳು ಬಹಳ ಸೊಗಸಾಗಿವೆ.

  2. ಶಿವಕುಮಾರ್ ಸಾಲಿ
    Jan 8, 2020 Reply

    ಬುದ್ದನಂತಹ ಜ್ಞಾನಿಯನ್ನು ನಿಜಕ್ಕೂ ಎಲ್ಲೆಲ್ಲಿ ಕಾಣಬೇಕೆಂದು ಸೂಚಿಸಿದ ಶರಣ ನಾಗರಾಜವರಿಗೆ ವಂದನೆಗಳು

  3. Chetan M.P
    Jan 9, 2020 Reply

    ಕವನದ ಒಂದೊಂದು ಪದವೂ ಮನನಯೋಗ್ಯ

  4. Dinesh P
    Jan 14, 2020 Reply

    ಬುದ್ಧನನ್ನ ಬದುಕಿನಲ್ಲಿ ಕಾಣುವ ಸುಂದರ ಪರಿಕಲ್ಪನೆ.

  5. Jayaraj Bidar
    Jan 16, 2020 Reply

    ಬುದ್ದನನ್ನು ಎಲ್ಲಿ, ಹೇಗೆ ಹುಡುಕಿಕೊಳ್ಳಬೇಕೆಂದು ಗೊತ್ತಾಯಿತು. ಬುದ್ದನ ಜಾಗದಲ್ಲಿ ಬಸವನ ಹೆಸರು ಹಾಕಿದರೂ ಕವನಕ್ಕೆ ಚ್ಯುತಿ ಬರುವುದಿಲ್ಲ. ಮಹಾತ್ಮರನ್ನು ಹೀಗೇ ಹುಡುಕಿಕೊಳ್ಳಬೇಕು.

  6. Chinmayi
    May 15, 2021 Reply

    ಬುದ್ದ ಬುದ್ದನಿಗೇ ಸರಿ

Leave a Reply to Chinmayi Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
September 5, 2019
Copyright © 2026 Bayalu