Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನ ಶರಣರು…
Share:
Poems April 9, 2021 ಕೆ.ಆರ್ ಮಂಗಳಾ

ನನ್ನ ಶರಣರು…

ನನ್ನ ಶರಣರು ಅವರು-
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು

ನನ್ನ ಶರಣರು ಅವರು-
ಶ್ರೇಷ್ಠ-ಕನಿಷ್ಠಗಳ ಹಿಡಿತಕ್ಕೆ ಸಿಗದವರು
ಸಂಗ್ರಹಣೆಯ ಮೋಹಕ್ಕೆ ಜಾರಿ ಬೀಳದವರು
ಅಹಮ್ಮಿನ ಆಟವನು ಅಡಗಿಸಬಲ್ಲವರು
ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನೆದೆಯಲುಳಿದವರು.

Previous post ನಾನರಿಯದ ಬಯಲು
ನಾನರಿಯದ ಬಯಲು
Next post ಲಿಂಗಾಚಾರ
ಲಿಂಗಾಚಾರ

Related Posts

ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 2

  1. Chandrika
    Apr 21, 2021 Reply

    very nice poem akka

  2. Sharan
    Apr 26, 2023 Reply

    ನನ್ನ ಶರಣರು ಎಂಬ ಅಭಿಮಾನದ ಸಾಲಿನೊಂದಿಗೆ ಶರಣ ದರ್ಶನ ಮಾಡಿಸಿದೆ ಈ ಕವಿತೆ ಶರಣು ಶರಣಾರ್ಥಿ

Leave a Reply to Sharan Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ಅನುಪಮ ಯೋಗಿ ಅನಿಮಿಷ
ಅನುಪಮ ಯೋಗಿ ಅನಿಮಿಷ
May 6, 2020
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
Copyright © 2025 Bayalu