Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನುವಿನ ಉಪಟಳ
Share:
Poems December 13, 2024 ಕೆ.ಆರ್ ಮಂಗಳಾ

ನಾನುವಿನ ಉಪಟಳ

ಕಣ್ಣಪಾಪೆಯಲಿ ನಾನವಿತು
ಕುಳಿತಿರಲು
ಕಾಣುವ ನೋಟಗಳಿಗೆ
ಲೆಕ್ಕ ಹಾಕುವರಾರು?

ತಲೆಯೊಳಗೆ ನಾನೆಂಬುದು
ತತ್ತಿ ಇಟ್ಟಿರುವಾಗ
ಬರುವ ಯೋಚನೆಗಳನು
ಎಣಿಸಿದವರಾರು?

ಮನದ ಮೂಲೆಮೂಲೆಯಲು
ನಾನೇ ಮಲಗಿರುವಾಗ
ಜಗದ ಸೊಬಗಿಗೆ
ಜಾಗವೆಲ್ಲಿಹುದು?

ಮೌನದ ಬಲೆಯೊಳಗೂ
ಸ್ವಗತಗಳೇ ತುಂಬಿರಲು
ಖಾಲಿಯಾಗುವ ಗಳಿಗೆ
ಬರುವುದುಂಟೇನು?

ನಾಲಿಗೆಯ ತುಂಬೆಲ್ಲ
ರುಚಿಗಳೇ ಮೆತ್ತಿರಲು
ಸಹಜತೆಯ ಸವಿಯದಕೆ
ತಿಳಿದಿತೇನು?

ನೋಟ- ಕೂಟಗಳು
ಜೊತೆಯಾಗಿ ಎಳೆಯಲು
ಬಾಳ ಬಂಡಿಯು ತನ್ನ
ಗುರಿ ಸೇರುವುದೇನು?

ಕಾಗದದ ದೋಣಿಯನೇ
ನಾನೆಂದುಕೊಂಡಾಗ
ಭವದಲೆಯ ಹೊಡೆತವನು
ತಡೆಯಲಾದೀತೆ?
ತಾ ಬರಿಯ ಗಾಳಿಪಟ
ಸೂತ್ರ ಇನ್ನಾರೋ
ಎಂದುಕೊಂಡಂತೆ ಹಾರು ಹಕ್ಕಿ
ಅಹಮಿಕೆಯ ಅರಮನೆಯೇ
ನನ್ನದೆನುವಾಗ
ಇರುವಿಕೆಯ ಆಗಸಕೆ
ಹಾರಲಾದೀತೇ?

ತನ್ನದಲ್ಲದ ತನುವಿನಲಿ
ಕೋಟೆಯೊಳು ಕೋಟೆ ಕಟ್ಟಿ
ಕಾಮಿಸುತಾ ಕಲ್ಪಿಸುತಾ
ಒಡೆತನ ಸಾಧಿಸಿಹ
ಮನದ ಮುಖ ಕಳಚದೆ
ಅಹಮಿಕೆ ಕರಗದು
ಅಂತರಂಗ ಕಾಣದು
ನಾನು ಮರೆಯಾಗದು…

Previous post ನೀರು… ಬರಿ ನೀರೇ?
ನೀರು… ಬರಿ ನೀರೇ?
Next post ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…

Related Posts

ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...
ಗಂಟಿನ ನಂಟು
Share:
Poems

ಗಂಟಿನ ನಂಟು

November 7, 2020 ಕೆ.ಆರ್ ಮಂಗಳಾ
ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...

Comments 1

  1. Padmalaya
    Dec 13, 2024 Reply

    ಬಿಡಾಕಾಗದಿದ್ದರೆ ಪೂಜೆ ಮಾಡಬಹುದು…

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಬಯಲಾಟ
ಬಯಲಾಟ
March 17, 2021
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಗಜಲ್…
ಗಜಲ್…
February 16, 2026
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
January 8, 2023
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಮಹಾನುಭಾವಿ ಆದಯ್ಯ
ಮಹಾನುಭಾವಿ ಆದಯ್ಯ
April 29, 2018
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
Copyright © 2026 Bayalu