Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...
ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಈ ಬಳ್ಳಿ…
ಈ ಬಳ್ಳಿ…
October 21, 2024
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
Copyright © 2025 Bayalu