Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...
ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪ
ಅನುಭವ ಮಂಟಪ
April 11, 2025
ಲಿಂಗಪೂಜೆ – ಜಂಗಮಸೇವೆ
ಲಿಂಗಪೂಜೆ – ಜಂಗಮಸೇವೆ
March 12, 2022
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಅನಿಶಾ…
ಅನಿಶಾ…
September 6, 2026
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಸೂರ್ಯ
ಸೂರ್ಯ
January 8, 2023
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
Copyright © 2026 Bayalu