Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ಕೇಳಿಸಿತೇ?
Share:
Poems

ಕೇಳಿಸಿತೇ?

April 6, 2024 ಜ್ಯೋತಿಲಿಂಗಪ್ಪ
ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...
ಬೆಳಕಿನ ಹುಳು
Share:
Poems

ಬೆಳಕಿನ ಹುಳು

December 9, 2025 ಜ್ಯೋತಿಲಿಂಗಪ್ಪ
ನನ್ನೀ ಮದವ ಸುಡಲು ಬರುವ ಬೆಳಕಿನ ಹುಳು ಹಗಲು ದೃಷ್ಟಿ ಮರೆ ಇರುಳು ಕಣ್ಣ ಮರೆ ಕತ್ತಲಲಿ ಮಿನುಗುವುದು ಏ ಕಣ್ಣೇ ದೃಷ್ಟಿಯ ಮರೆ ಮಾಡದಿರು ಇದು ಬರಿಯೆ ಹುಳು ಅಲ್ಲಾ ಬೆಳಕಿನ ಹುಳು...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹಣತೆ ಸಾಕು
ಹಣತೆ ಸಾಕು
September 14, 2024
ನಾನೆಂಬ ನಿನಾದ…
ನಾನೆಂಬ ನಿನಾದ…
January 15, 2026
ಶರಣನಾಗುವುದು…
ಶರಣನಾಗುವುದು…
February 10, 2023
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಹುಡುಕಾಟ…
ಹುಡುಕಾಟ…
August 8, 2021
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
Copyright © 2026 Bayalu