Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
ನಾನು… ನನ್ನದು
Share:
Poems

ನಾನು… ನನ್ನದು

July 4, 2021 ಜ್ಯೋತಿಲಿಂಗಪ್ಪ
ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave a Reply to K.S. Shivashankar Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
Copyright © 2026 Bayalu