Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave a Reply to ವೀರೇಶ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಮತ್ರ್ಯಲೋಕದ ಮಹಾಮನೆ
ಮತ್ರ್ಯಲೋಕದ ಮಹಾಮನೆ
January 15, 2026
ಹಣತೆಯ ಹಂಗು
ಹಣತೆಯ ಹಂಗು
October 19, 2025
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
Copyright © 2026 Bayalu