Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನು ಯಾರು?
Share:
Poems December 8, 2021 Bayalu

ನಾನು ಯಾರು?

ಕನ್ನಡಿ ಪ್ರತಿಬಿಂಬದಲ್ಲಿ ಕಂಡ
ಕರಿಮೈಯ ಕವಚ ನೋಡಿ
ಊಹಿಸಿಕೊಂಡದ್ದು
ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ
ಹೋದವರನು ಕಂಡು
ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಿನ್ನ ನೀ ತಿಳಿಯೆಂದು ಹೊರಟು
ಗೀತೆ-ಭಾಷ್ಯಗಳಲಿ, ಗಾಹೆ-ದೋಹೆಗಳಲಿ
ಅಹಂಬ್ರಹ್ಮನೆಂದು ಏಕಾತ್ಮವಾಗಿ
ಅನಾತ್ಮವ ನೋಡಿ
ಪಾಂಡಿತ್ಯದ ಸೊಕ್ಕಿನಿಂದ ಹೊರಬಿದ್ದವನು ಕೇಳಿದ ನಾನು ಯಾರು?

ನಾನೆಂಬುದೇ ಅಹಂಕಾರ
ನೀನೆಂಬುದೇ ಮಾಯೆ!
ಮನಸಿಜನ ಮಾಯೆ ವಿಧಿ ವಿಳಸನದಲ್ಲಿ ನೆರಂಬಡೆ
ಕೊಂದು ಕೂಗದೇ ನರರುಂ!
ಮನಸಿಜನ ಮೋಸವನರಿತ ಅಮನಸ್ಕ ಕೇಳಿದ ನಾನು ಯಾರು?

ಮೇಲೆ ಮಂಟಪದಾ ವಸ್ತು
ಬ್ರಹ್ಮಾಂಡ ಪಿಂಡಾಂಡವಾಗಿರಲು
ಪಿಂಡವನಳಿಸಿ ಬ್ರಹ್ಮಾಂಡ ಬಯಲಾಗಿ
ಧಮ್ಮ ಪವತ್ತನವ ಹಿಡಿದಾತ ಕೇಳಿದ ನಾನು ಯಾರು?

ನಾನು ಯಾರು ಕೊಟ್ಟ ಕುದುರೆಯನು ಏರಲರಿಯದವನ
ಪ್ರಶ್ನೆ ಮತ್ತು ಉತ್ತರ
ನಾನು ಇಲ್ಲವೆಂದು ಹೊರಟ ವೆಂಕಟಗಿರಿಯಪ್ಪ
ಬುಟ್ಟಪ್ಪ ಹುಟ್ಲಪ್ಪ
ಕಾಯಕ ಕೇವಲಿಗಳು, ನಿಜಯೋಗಿಗಳು…

-ಕೇಶವಮೂರ್ತಿ ಹೆಚ್.ಎನ್
(‘ನಾನು ಯಾರು? ಎಂಬ ಆಳ-ನಿರಾಳ’ ಪುಸ್ತಕದ ಪ್ರೇರಣೆ)

Previous post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
Next post ಬೆಳಕಲಿ ದೀಪ
ಬೆಳಕಲಿ ದೀಪ

Related Posts

ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...
ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...

Comments 3

  1. K.S. Shivashankar
    Dec 14, 2021 Reply

    ನಾನು ಯಾರು? ಪುಸ್ತಕವನ್ನು ನಾನೂ ಓದಿದೆ. ಇಲ್ಲಿನ ಕವಿಗಳು ಪುಸ್ತಕದ ಸದಾಶಯವನ್ನು ಕಾವ್ಯದಲ್ಲಿ ಸೊಗಸಾಗಿ ಮೂಡಿಸಿದ್ದಾರೆ.

  2. ಅಹ್ಮದ್
    Jul 21, 2022 Reply

    ಚೆನ್ನಾಗಿದೆ

  3. ವೀರೇಶ್
    Sep 15, 2024 Reply

    ನಾನೆಂಬುದೇ ಅಹಂಕಾರ ನೀನೆಂಬುದೇ ಮಾಯೆ! ✍🏻👌🏻

Leave a Reply to ವೀರೇಶ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಗೇಣು ದಾರಿ
ಗೇಣು ದಾರಿ
July 10, 2023
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
Copyright © 2026 Bayalu