Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನೆಂಬ ನಿನಾದ…
Share:
Poems January 15, 2026 ಕೆ.ಆರ್ ಮಂಗಳಾ

ನಾನೆಂಬ ನಿನಾದ…

ನಾ ಹುಟ್ಟುವ ಮುನ್ನ
ಹೇಗಿದ್ದೆ ನೆನಪಿಲ್ಲಾ
ಹುಟ್ಟಿನೊಡನೆ
ಬಂದ ಬಳುವಳಿಯೇ
ನಾನೆಂಬ ಎಳೆ
ಈ ಅಹಮಿಕೆಗೆ
ಪ್ರಾಣ ಒತ್ತೆಯಿಟ್ಟು
ಎಷ್ಟು ಯುಗಗಳಾದವು?

ಒಂದೆಳೆ ಇದ್ದುದು
ಒತ್ತೊತ್ತಾಗಿ ಸೇರುತ್ತಾ
ಬುಟ್ಟಿಯಾಗಿ, ಬಟ್ಟೆಯಾಗಿ
ಬಲೆಯಾಗಿ ನನ್ನ
ತನ್ನೊಳು ಬಂಧಿಸಿದ್ದ
ತಿಳಿಸಲು ನೀನೇ
ಬರಬೇಕಾಯಿತು ಗುರುವೇ.

ತಾ ಬೀಗಲು
ಒಂದೊಂದ ಹೆಸರಿಟ್ಟು
ರೂಪ ಕೊಟ್ಟು,
ಬಣ್ಣ ತುಂಬಿ
ನಂಟನಂತೆ, ನಲ್ಲನಂತೆ
ಚಂದದ ಮಾತುಗಳಲ್ಲಿ
ನಿಜವ ಮರೆಸುತ್ತಾ
ಕಾವಲುಗಾರನಂತೆ
ತನ್ನ ಹಿತವನೇ ಕಾವುದು

ತನ್ನಿರುವಿನ
ಸುಳುಹು ಸಿಗದಂತೆ
ನಾಜೂಕಾಗಿ
ಕಾರ್ಯಸಾಧಿಸುವ
ಅದರ ಪಟ್ಟುಗಳನರಿತು
ಕೋಡ ಹಿಡಿದು
ನೆಲಕ್ಕೆ ಚಚ್ಚಿ
ಕಂಡಲ್ಲಿ ಗುಂಡು ಸಿಡಿಸಿ
ಕೊಂದೇ ಬಿಟ್ಟೆನೆಂದು
ಅಂದುಕೊಳ್ಳುವಾಗಲೇ
ಇನ್ನೆಲ್ಲೋ ಚಿಗಿತು
ಮತ್ತೆಲ್ಲೋ
ಹೂ-ಕಾಯಿ ಬಿಟ್ಟು
ಕನ್ನಡಿಯ ಬಿಂಬದಂತೆ
ಅಣಕಿಸುತ್ತದೆ…
ಮುಪ್ಪಿಲ್ಲದುದಕೆ
ಸಾವುಂಟೆ?
ನನಗೂ- ನಿನಗೂ
ನಡುವೆ ನಿಂತಿದೆ
ಉಸಿರುಗಟ್ಟಿಸುವ
ಗಟ್ಟಿಗಾಜಿನ ಪರದೆ.

ಸಿಟ್ಟು- ಸೆಡವುಗಳ
ನೋವು ಕ್ಲೇಷಗಳ
ಭವದ ಬೇರು
ಎಲ್ಲಿದೆ ಎನುವುದ
ನಾನೀಗ ಬಲ್ಲೆ
ಒಳಗೂ-ಹೊರಗೂ
ತನಗಾಗಿಯೇ
ತಡಬಡಿಸುತ್ತದೆ
ಚೂರು ಧಕ್ಕೆಯಾದರೂ
ಸಿಡಿಲು ಬಡಿದಂತೆ
ಚಡಪಡಿಸುತ್ತದೆ
ಒತ್ತುತ್ತದೆ
ಎದೆ ಮೇಲೆ ಕುಳಿತು
ಮಣಭಾರದಂತೆ
ತೊಲಗಿಸು ತಂದೆ
ನಾನೆಂಬ ಹೊರೆಯ.

ಅರಿವಿನ ರೆಪ್ಪೆ
ತೆರೆಯದ ಕೂಸಿಗೆ
ಬಯಲ ಅನಾವರಣ!
ಮಾಗಿ ಕಾಲದಲಿ
ವಸಂತದ ವರ್ಣನೆಯೇ?
ನಮ್ಮಿಬ್ಬರ ನಡುವೆ
ನೆಲ-ಮುಗಿಲಿನಂತರ
ಕರುಣೆ ಇರಲಿ ಗುರುವೆ.

ಗುರು:
ನೆರಳಲಿ ನಿಂತು
ಕತ್ತಲು ಎನುವರೆ?
ಉಸಿರೇ ಇಲ್ಲದ
ನೆಲೆಯೇ ಕಾಣದ
ತೃಣಕಣ ಹಮ್ಮಿಗೆ
ಹೆದರುವುದೇ?

ಕೂಗಿ ಕರೆದರೂ
ಕಿವಿಗೊಡದಿರು
ಹತ್ತಿರ ಬಂದರೂ
ಗಮನಿಸದಿರು
ಎದುರೇ ನಿಂತರೂ
ಉತ್ತರಿಸದಿರು
ಮಾತಿನ ಕೂಟಕೆ
ಮರುಳಾಗದಿರು
ಮೌನದೊಳಗೂ
ಪಿಸುನುಡಿಯದಿದ್ದೊಡೆ
ಕೇಳದು ಎಂದಿಗೂ
ನಾನೆಂಬ ನಿನಾದ.

ಅರಿವಿಗೂ- ನಿನಗೂ
ಕೂದಲೆಳೆಯಂತರ
ಕೊರಗುವುದೇಕೆ ಕಂದಾ?
ಬೀಗುವ ಹಮ್ಮೇ
ಆಗುವ ಹಂಬಲ
ಎರಡೂ ಬೇಡ ಕೂಸೇ
ನೀ ನೀನಾಗಿದ್ದರೆ
ಅದುವೆ ಚೆನ್ನ
ಈ ಮರ್ಮವ ನೀನರಿಯೇ

ನಿನ್ನೆ-ನಾಳೆಗಳ
ನಂಟನು ಬಿಟ್ಟರೆ
ನಾನೆಂಬುದರ
ಸೊಂಟವೇ ಮುರಿವುದು
ನಿನ್ನ ಕಣ್ಣಲೇ
ನಿನ್ನನು ಕಂಡರೆ
ಹಮ್ಮಿನ ಭಾವವೇ
ಕರಗುವುದು.

ಈ ಕ್ಷಣದಲಿ
‘ಆ ಇಗೋ’ ಎಲ್ಲಿದೆ?
ಅದು ಕಾಲದ ಬಾಗಿಲ
ಕಾಯುವ ಕಾವಲು.
ಬಯಲ ಪ್ರೀತಿಯ
ಅನಂತದ ಶಿಶುವಿಗೆ
ಕಾಲದ ಸೂತಕ
ಕಾಡುವುದೇ?

Previous post ಬಯಲಾದ ದೇವರು
ಬಯಲಾದ ದೇವರು
Next post ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಮಣ್ಣಿನ ಹೃದಯದಲಿ
Share:
Poems

ಮಣ್ಣಿನ ಹೃದಯದಲಿ

September 13, 2025 ಜಬೀವುಲ್ಲಾ ಎಂ.ಅಸದ್
ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...

Comments 2

  1. Dr.Basavaraj Sabarad
    Jan 17, 2026 Reply

    ಮಂಗಳಾ ಅವರ ಕವಿತೆಗಳು ತುಂಬಾ ಅರ್ಥಪೂರ್ಣವಾಗಿವೆ.ಅಭಿನಂದನೆಗಳು.

  2. Dr. Shraddhananda swamiji, Vijayapura
    Feb 5, 2026 Reply

    The poem is really good.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಗುರುವಂದನೆ
ಗುರುವಂದನೆ
October 13, 2022
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
Copyright © 2026 Bayalu