Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನೊಂದು ನೀರ್ಗುಳ್ಳೆ
Share:
Poems September 6, 2023 ಕೆ.ಆರ್ ಮಂಗಳಾ

ನಾನೊಂದು ನೀರ್ಗುಳ್ಳೆ

ಕಾಲದ ಊದುಗೊಳವೆಯಲಿ
ನಿರಂತರವಾಗಿ ಉಕ್ಕುತಿವೆ
ಅನಂತಾನಂತ ನೀರ್ಗುಳ್ಳೆ
ಎಲ್ಲಕೂ ಒಂದೇ ಹುಟ್ಟು
ಒಂದೇ ಬಗೆಯ ಸಂಯೋಜನೆ

ನಾ ಬೇರೆ ನೀ ಬೇರೆ
ಅಂವ ಬೇರೆ ಇಂವ ಬೇರೆ
ನಾ ಮೇಲು ನೀ ಕೆಳಗೆ
ಅಕಿ ಹೆಚ್ಚು ಇಕಿ ಕಡಿಮೆ
ಗುಳ್ಳೆಯ ತೆಳು ಗೆರೆಯ ಆಚೀಚೆ
ಜಗದುದ್ದಗಲಕ್ಕೂ ತಾರತಮ್ಯ

ನೋಡುನೋಡುತ್ತಲೇ
ಇಲ್ಲೇ ಇದ್ದದ್ದು, ಅತ್ತ ಸರಿದದ್ದು
ಈಗ ಚಿಮ್ಮಿದ್ದು, ಮೇಲೆ ಹಾರಿದ್ದು
ಇಲ್ಲವಾಗುವ ನೀರ್ಗುಳ್ಳೆಗಳಲ್ಲಿ
ಯಾವುದಕೆ ಪೈಪೋಟಿ?
ಹಿರಿದಾದರೇನು, ಕಿರಿದಾದರೇನು
ಬಣ್ಣ ಯಾವುದಾದರೇನು
ಅಮರತ್ವವುಂಟೆ ಗುಳ್ಳೆಗೆ?

ಮುಟ್ಟಿದರೆ ಫಟ್ಟೆನುವ ಗುಳ್ಳೆ
ತನ್ನಲ್ಲಿ ತಾನೇ ಊದೆಬ್ಬಿಸುವ
ಮೋಹ, ಮದ, ಮತ್ಸರ
ದ್ವೇಷ, ದುರ್ಗುಣಗಳ
ಒಂದಲ್ಲಾ ಎರಡಲ್ಲಾ
ನೂರಾರು ಬುರುಜುಗಳು
ಗುಳ್ಳೆಯೊಳಗಣ ಗುಳ್ಳೆಗಳ
ಈ ಮೆಳ್ಳಗಣ್ಣಿನ ನೋಟಕೆ
ಕಂಡೀತೇ ಲೋಕ ಸತ್ಯ?

ನಿನ್ನೊಳು ನೀನಿರು ಎನುವ
ಗುರು ಸೂತ್ರವ ಹಿಡಿದು
ಈ ಪರಕಾಯ ಪೊರೆಗಳ
ಹಂಗು ಕಳಚಲೇ ಬೇಕು…
ಕೊರಗಲಿಕೆ, ಬೇಯಲಿಕೆ
ಸಮಯವೆಲ್ಲಿದೆ ಎನುವ
ನಶ್ವರತೆಯ ಸತ್ಯವನು
ಕಣ್ಬಿಟ್ಟು ನೋಡಲೇ ಬೇಕು.

ಇಬ್ಬನಿಯ ಹನಿ ಎನ್ನಿ
ಮಿನುಗಿ ಮರೆಯಾಗೋ ಮಿಂಚೆನ್ನಿ,
ಭ್ರಮೆಯೆನ್ನಿ, ಕನಸೆನ್ನಿ,
ಮೋಡದ ನೆರಳೆನ್ನಿ,
ಅಲೆಯೆನ್ನಿ, ಇಂಚರವೆನ್ನಿ,
ಬೀಸಿ ಹೋಗುವ ಗಾಳಿಯೆನ್ನಿ,
ಹಬೆ ಎನ್ನಿ, ಬಾಷ್ಪವೆನ್ನಿ…
ಏನಾದರೂ ಅನ್ನಿ ಈ ಗುಳ್ಳೆಗೆ

ಅನಂತ ಕಾಲದಲಿ, ಅನಂತ ವಸ್ತುವಿನಲಿ
ಅನಂತ ಜಾಗದಲಿ
ಅನಂತಾನಂತ ಗುಳ್ಳೆಗಳಲಿ
ಕ್ಷಣ ಮಾತ್ರವೇ ಇರುವ,
ಯಾವಾಗ ಬೇಕಾದರೂ ಸಿಡಿವ
ನೀರ ನಿರ್ಮಿತಿ ಮಾತ್ರವೇ
ನಾನೆನುವ ನಿಜವು ಮರೆಯದಿರಲಿ.

Previous post ಹಾಯ್ಕು
ಹಾಯ್ಕು
Next post ವಚನ – ಚಿಂತನ
ವಚನ – ಚಿಂತನ

Related Posts

ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
Copyright © 2025 Bayalu