Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿಜ ನನಸಿನ ತಾವ…
Share:
Poems July 10, 2023 ಕೆ.ಆರ್ ಮಂಗಳಾ

ನಿಜ ನನಸಿನ ತಾವ…

ಕಣ್ಣು ಮುಚ್ಚಿದಾಗ ಬರುವ ಕನಸಿಗೂ
ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ
ಏನಿಹುದು ಅಂತರ?
ನಗು, ಅಳು, ನೋವು, ಸಂಕಟ…
ಅನುಭವದಲ್ಲಿ ಅದ್ದಿ ತೆಗೆದಂತೆ
ಎಲ್ಲ ಎದುರೆದುರೇ ನಡೆದಂತೆ!
ಹೊಯ್ದಾಟಗಳ ಹಗಲ ನನಸು,
ಕನವರಿಕೆಗಳಾ ಇರುಳ ಕನಸು

ನನಸಂತೆ ಕನಸಲೂ ಅದೇ ಅದೇ
ಒಡಲ ಹಸಿವು, ಹುಸಿಗಳು
ಚಡಪಡಿಕೆಗಳು, ಹುಡುಕಾಟಗಳು
ಅಸಹಾಯಕತೆಯ ತಡವರಿಕೆಗಳು
ಇಲ್ಲಿರುವವರೆಲ್ಲಾ ಅಲ್ಲಿ ಸಿಗುತ್ತಾರೆ
ಅಲ್ಲಿಯವರೆಲ್ಲಾ ಇಲ್ಲಿ ಕಾಣುತ್ತಾರೆ
ಸಂಬಂಧಗಳು, ವಿರೋಧಗಳು,
ದಡಗಳೆರಡರ ಮೇಲೂ ನಿತ್ಯ ಹರಿದಾಡುತ್ತವೆ

ಕನಸು-ನನಸಿನ ಮೋಡಿಯಾಟದಲಿ
ನಾಳೆಗಳು ನಿನ್ನೆಗಳಾಗುತಿವೆ
ಮಲಗಿದಾಗ ದಿನ ಮರೆಯಾಗುತ್ತದೆ
ಎಚ್ಚರಾದಾಗ ಕನಸು ಸರಿಯುತ್ತದೆ
ಯಾವುದು ದಿಟ, ಯಾವುದು ಸಟೆ?
ಅಲ್ಲಿ ತೋರಿದ್ದೋ, ಇಲ್ಲಿ ಕಂಡದ್ದೋ?

ಅರಿವಾಗಿ ಎದೆಗಿಳಿದ ಗುರು ಹೇಳಿದ-
ಎರಡೂ ಸುಳ್ಳಲ್ಲ, ನಿಜದಿರುವೂ ಅಲ್ಲಿಲ್ಲ
ವಿಷಮ ವಿಷಯಗಳ ಹಗಲಿನ ಜಾತ್ರೆ
ಸಿಗದ ಬೇಗುದಿಗಳ ಇರುಳಿನ ಸಂತೆ
ಎಚ್ಚರವಾಗದ ಅಮಲಿನ ಬದುಕಿಗೆ
ಸತ್ಯದ ನೆಲೆಯು ಕಾಣುವುದೆ?
ಕನಸೊಳಗೊಂದು ಕನಸನು ಕಟ್ಟಲು
ನಿಜ ನನಸಿನ ಮರ್ಮ ತಿಳಿಯುವುದೆ?

ನಿನ್ನ ಕದಳಿಯ ನೀ ದಾಟಲೇ ಬೇಕು
ನಿನ್ನ ತಾವಕೆ ನೀ ಸೇರಲೇ ಬೇಕು
ಜಂಗಮ ಚಲನೆಯ ಲಾಸ್ಯವನರಿಯಲು
ಅಚಲವಾಗಿ ನೀ ನಿಲ್ಲಲೇ ಬೇಕು.

Previous post ಗೇಣು ದಾರಿ
ಗೇಣು ದಾರಿ
Next post ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2

Related Posts

ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...

Comments 1

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Jul 13, 2023 Reply

    ಕಣ್ಣೆಚ್ಚರದಲಿ ಕನಸ ನೋಡಬೇಕು.. ಎಂಬುದನ್ನು ಎಷ್ಟು ಸರಳವಾಗಿ ಹೇಳಿರುವಿರಿ.
    ಓದುವುದೇ ಒಂದು ಚೆಂದ .

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪ
ಅನುಭವ ಮಂಟಪ
April 11, 2025
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
Copyright © 2025 Bayalu