Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿಜ ನನಸಿನ ತಾವ…
Share:
Poems July 10, 2023 ಕೆ.ಆರ್ ಮಂಗಳಾ

ನಿಜ ನನಸಿನ ತಾವ…

ಕಣ್ಣು ಮುಚ್ಚಿದಾಗ ಬರುವ ಕನಸಿಗೂ
ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ
ಏನಿಹುದು ಅಂತರ?
ನಗು, ಅಳು, ನೋವು, ಸಂಕಟ…
ಅನುಭವದಲ್ಲಿ ಅದ್ದಿ ತೆಗೆದಂತೆ
ಎಲ್ಲ ಎದುರೆದುರೇ ನಡೆದಂತೆ!
ಹೊಯ್ದಾಟಗಳ ಹಗಲ ನನಸು,
ಕನವರಿಕೆಗಳಾ ಇರುಳ ಕನಸು

ನನಸಂತೆ ಕನಸಲೂ ಅದೇ ಅದೇ
ಒಡಲ ಹಸಿವು, ಹುಸಿಗಳು
ಚಡಪಡಿಕೆಗಳು, ಹುಡುಕಾಟಗಳು
ಅಸಹಾಯಕತೆಯ ತಡವರಿಕೆಗಳು
ಇಲ್ಲಿರುವವರೆಲ್ಲಾ ಅಲ್ಲಿ ಸಿಗುತ್ತಾರೆ
ಅಲ್ಲಿಯವರೆಲ್ಲಾ ಇಲ್ಲಿ ಕಾಣುತ್ತಾರೆ
ಸಂಬಂಧಗಳು, ವಿರೋಧಗಳು,
ದಡಗಳೆರಡರ ಮೇಲೂ ನಿತ್ಯ ಹರಿದಾಡುತ್ತವೆ

ಕನಸು-ನನಸಿನ ಮೋಡಿಯಾಟದಲಿ
ನಾಳೆಗಳು ನಿನ್ನೆಗಳಾಗುತಿವೆ
ಮಲಗಿದಾಗ ದಿನ ಮರೆಯಾಗುತ್ತದೆ
ಎಚ್ಚರಾದಾಗ ಕನಸು ಸರಿಯುತ್ತದೆ
ಯಾವುದು ದಿಟ, ಯಾವುದು ಸಟೆ?
ಅಲ್ಲಿ ತೋರಿದ್ದೋ, ಇಲ್ಲಿ ಕಂಡದ್ದೋ?

ಅರಿವಾಗಿ ಎದೆಗಿಳಿದ ಗುರು ಹೇಳಿದ-
ಎರಡೂ ಸುಳ್ಳಲ್ಲ, ನಿಜದಿರುವೂ ಅಲ್ಲಿಲ್ಲ
ವಿಷಮ ವಿಷಯಗಳ ಹಗಲಿನ ಜಾತ್ರೆ
ಸಿಗದ ಬೇಗುದಿಗಳ ಇರುಳಿನ ಸಂತೆ
ಎಚ್ಚರವಾಗದ ಅಮಲಿನ ಬದುಕಿಗೆ
ಸತ್ಯದ ನೆಲೆಯು ಕಾಣುವುದೆ?
ಕನಸೊಳಗೊಂದು ಕನಸನು ಕಟ್ಟಲು
ನಿಜ ನನಸಿನ ಮರ್ಮ ತಿಳಿಯುವುದೆ?

ನಿನ್ನ ಕದಳಿಯ ನೀ ದಾಟಲೇ ಬೇಕು
ನಿನ್ನ ತಾವಕೆ ನೀ ಸೇರಲೇ ಬೇಕು
ಜಂಗಮ ಚಲನೆಯ ಲಾಸ್ಯವನರಿಯಲು
ಅಚಲವಾಗಿ ನೀ ನಿಲ್ಲಲೇ ಬೇಕು.

Previous post ಗೇಣು ದಾರಿ
ಗೇಣು ದಾರಿ
Next post ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2

Related Posts

ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...
ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...

Comments 1

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Jul 13, 2023 Reply

    ಕಣ್ಣೆಚ್ಚರದಲಿ ಕನಸ ನೋಡಬೇಕು.. ಎಂಬುದನ್ನು ಎಷ್ಟು ಸರಳವಾಗಿ ಹೇಳಿರುವಿರಿ.
    ಓದುವುದೇ ಒಂದು ಚೆಂದ .

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
September 5, 2019
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
Copyright © 2026 Bayalu