Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿಜ ನನಸಿನ ತಾವ…
Share:
Poems July 10, 2023 ಕೆ.ಆರ್ ಮಂಗಳಾ

ನಿಜ ನನಸಿನ ತಾವ…

ಕಣ್ಣು ಮುಚ್ಚಿದಾಗ ಬರುವ ಕನಸಿಗೂ
ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ
ಏನಿಹುದು ಅಂತರ?
ನಗು, ಅಳು, ನೋವು, ಸಂಕಟ…
ಅನುಭವದಲ್ಲಿ ಅದ್ದಿ ತೆಗೆದಂತೆ
ಎಲ್ಲ ಎದುರೆದುರೇ ನಡೆದಂತೆ!
ಹೊಯ್ದಾಟಗಳ ಹಗಲ ನನಸು,
ಕನವರಿಕೆಗಳಾ ಇರುಳ ಕನಸು

ನನಸಂತೆ ಕನಸಲೂ ಅದೇ ಅದೇ
ಒಡಲ ಹಸಿವು, ಹುಸಿಗಳು
ಚಡಪಡಿಕೆಗಳು, ಹುಡುಕಾಟಗಳು
ಅಸಹಾಯಕತೆಯ ತಡವರಿಕೆಗಳು
ಇಲ್ಲಿರುವವರೆಲ್ಲಾ ಅಲ್ಲಿ ಸಿಗುತ್ತಾರೆ
ಅಲ್ಲಿಯವರೆಲ್ಲಾ ಇಲ್ಲಿ ಕಾಣುತ್ತಾರೆ
ಸಂಬಂಧಗಳು, ವಿರೋಧಗಳು,
ದಡಗಳೆರಡರ ಮೇಲೂ ನಿತ್ಯ ಹರಿದಾಡುತ್ತವೆ

ಕನಸು-ನನಸಿನ ಮೋಡಿಯಾಟದಲಿ
ನಾಳೆಗಳು ನಿನ್ನೆಗಳಾಗುತಿವೆ
ಮಲಗಿದಾಗ ದಿನ ಮರೆಯಾಗುತ್ತದೆ
ಎಚ್ಚರಾದಾಗ ಕನಸು ಸರಿಯುತ್ತದೆ
ಯಾವುದು ದಿಟ, ಯಾವುದು ಸಟೆ?
ಅಲ್ಲಿ ತೋರಿದ್ದೋ, ಇಲ್ಲಿ ಕಂಡದ್ದೋ?

ಅರಿವಾಗಿ ಎದೆಗಿಳಿದ ಗುರು ಹೇಳಿದ-
ಎರಡೂ ಸುಳ್ಳಲ್ಲ, ನಿಜದಿರುವೂ ಅಲ್ಲಿಲ್ಲ
ವಿಷಮ ವಿಷಯಗಳ ಹಗಲಿನ ಜಾತ್ರೆ
ಸಿಗದ ಬೇಗುದಿಗಳ ಇರುಳಿನ ಸಂತೆ
ಎಚ್ಚರವಾಗದ ಅಮಲಿನ ಬದುಕಿಗೆ
ಸತ್ಯದ ನೆಲೆಯು ಕಾಣುವುದೆ?
ಕನಸೊಳಗೊಂದು ಕನಸನು ಕಟ್ಟಲು
ನಿಜ ನನಸಿನ ಮರ್ಮ ತಿಳಿಯುವುದೆ?

ನಿನ್ನ ಕದಳಿಯ ನೀ ದಾಟಲೇ ಬೇಕು
ನಿನ್ನ ತಾವಕೆ ನೀ ಸೇರಲೇ ಬೇಕು
ಜಂಗಮ ಚಲನೆಯ ಲಾಸ್ಯವನರಿಯಲು
ಅಚಲವಾಗಿ ನೀ ನಿಲ್ಲಲೇ ಬೇಕು.

Previous post ಗೇಣು ದಾರಿ
ಗೇಣು ದಾರಿ
Next post ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2

Related Posts

ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
ಕಾಣದ ಬೆಳಕ ಜಾಡನರಸಿ…
Share:
Poems

ಕಾಣದ ಬೆಳಕ ಜಾಡನರಸಿ…

December 13, 2024 ಜಬೀವುಲ್ಲಾ ಎಂ.ಅಸದ್
ಮರೆತ ಇಳಿ ಸಂಜೆಯೊಂದು ಮುಂಜಾನೆಗೆ ಕಾಡುವಾಗ ಕಾಫಿ ಮುಗಿದ ಕಪ್ಪಿನಲಿ ತುಂಬಿ ಚೆಲ್ಲಿದೆ ವೈರಾಗ್ಯ ಶೂನ್ಯ ಹೀರಿದವನೆ ವಶ ಕಾಲು ಮುರಿದ ಕುರ್ಚಿಯ ಮೇಲು ಕಾಲಿನ ಮೇಲೆ ಕಾಲು ಹಾಕಿ...

Comments 1

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Jul 13, 2023 Reply

    ಕಣ್ಣೆಚ್ಚರದಲಿ ಕನಸ ನೋಡಬೇಕು.. ಎಂಬುದನ್ನು ಎಷ್ಟು ಸರಳವಾಗಿ ಹೇಳಿರುವಿರಿ.
    ಓದುವುದೇ ಒಂದು ಚೆಂದ .

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಕೇಳಿಸಿತೇ?
ಕೇಳಿಸಿತೇ?
April 6, 2024
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಮೊಟ್ಟೆ- ಗೂಡು
ಮೊಟ್ಟೆ- ಗೂಡು
April 11, 2025
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
Copyright © 2026 Bayalu