Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿಜ ನನಸಿನ ತಾವ…
Share:
Poems July 10, 2023 ಕೆ.ಆರ್ ಮಂಗಳಾ

ನಿಜ ನನಸಿನ ತಾವ…

ಕಣ್ಣು ಮುಚ್ಚಿದಾಗ ಬರುವ ಕನಸಿಗೂ
ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ
ಏನಿಹುದು ಅಂತರ?
ನಗು, ಅಳು, ನೋವು, ಸಂಕಟ…
ಅನುಭವದಲ್ಲಿ ಅದ್ದಿ ತೆಗೆದಂತೆ
ಎಲ್ಲ ಎದುರೆದುರೇ ನಡೆದಂತೆ!
ಹೊಯ್ದಾಟಗಳ ಹಗಲ ನನಸು,
ಕನವರಿಕೆಗಳಾ ಇರುಳ ಕನಸು

ನನಸಂತೆ ಕನಸಲೂ ಅದೇ ಅದೇ
ಒಡಲ ಹಸಿವು, ಹುಸಿಗಳು
ಚಡಪಡಿಕೆಗಳು, ಹುಡುಕಾಟಗಳು
ಅಸಹಾಯಕತೆಯ ತಡವರಿಕೆಗಳು
ಇಲ್ಲಿರುವವರೆಲ್ಲಾ ಅಲ್ಲಿ ಸಿಗುತ್ತಾರೆ
ಅಲ್ಲಿಯವರೆಲ್ಲಾ ಇಲ್ಲಿ ಕಾಣುತ್ತಾರೆ
ಸಂಬಂಧಗಳು, ವಿರೋಧಗಳು,
ದಡಗಳೆರಡರ ಮೇಲೂ ನಿತ್ಯ ಹರಿದಾಡುತ್ತವೆ

ಕನಸು-ನನಸಿನ ಮೋಡಿಯಾಟದಲಿ
ನಾಳೆಗಳು ನಿನ್ನೆಗಳಾಗುತಿವೆ
ಮಲಗಿದಾಗ ದಿನ ಮರೆಯಾಗುತ್ತದೆ
ಎಚ್ಚರಾದಾಗ ಕನಸು ಸರಿಯುತ್ತದೆ
ಯಾವುದು ದಿಟ, ಯಾವುದು ಸಟೆ?
ಅಲ್ಲಿ ತೋರಿದ್ದೋ, ಇಲ್ಲಿ ಕಂಡದ್ದೋ?

ಅರಿವಾಗಿ ಎದೆಗಿಳಿದ ಗುರು ಹೇಳಿದ-
ಎರಡೂ ಸುಳ್ಳಲ್ಲ, ನಿಜದಿರುವೂ ಅಲ್ಲಿಲ್ಲ
ವಿಷಮ ವಿಷಯಗಳ ಹಗಲಿನ ಜಾತ್ರೆ
ಸಿಗದ ಬೇಗುದಿಗಳ ಇರುಳಿನ ಸಂತೆ
ಎಚ್ಚರವಾಗದ ಅಮಲಿನ ಬದುಕಿಗೆ
ಸತ್ಯದ ನೆಲೆಯು ಕಾಣುವುದೆ?
ಕನಸೊಳಗೊಂದು ಕನಸನು ಕಟ್ಟಲು
ನಿಜ ನನಸಿನ ಮರ್ಮ ತಿಳಿಯುವುದೆ?

ನಿನ್ನ ಕದಳಿಯ ನೀ ದಾಟಲೇ ಬೇಕು
ನಿನ್ನ ತಾವಕೆ ನೀ ಸೇರಲೇ ಬೇಕು
ಜಂಗಮ ಚಲನೆಯ ಲಾಸ್ಯವನರಿಯಲು
ಅಚಲವಾಗಿ ನೀ ನಿಲ್ಲಲೇ ಬೇಕು.

Previous post ಗೇಣು ದಾರಿ
ಗೇಣು ದಾರಿ
Next post ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...

Comments 1

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Jul 13, 2023 Reply

    ಕಣ್ಣೆಚ್ಚರದಲಿ ಕನಸ ನೋಡಬೇಕು.. ಎಂಬುದನ್ನು ಎಷ್ಟು ಸರಳವಾಗಿ ಹೇಳಿರುವಿರಿ.
    ಓದುವುದೇ ಒಂದು ಚೆಂದ .

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಸನಾತನ ಧರ್ಮ
ಸನಾತನ ಧರ್ಮ
October 10, 2023
Copyright © 2026 Bayalu