Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನದೊಂದು ಸ್ಪರ್ಶ
Share:
Poems February 16, 2026 ಕೆ.ಆರ್ ಮಂಗಳಾ

ನಿನ್ನದೊಂದು ಸ್ಪರ್ಶ

ಅಷ್ಟು ಸಲೀಸಲ್ಲಾ ಬಿಡು
ನಿನ್ನ ಕೈ ಹಿಡಿಯುವುದು
ಎದುರಿದ್ದೂ ಅವಿತಿರುವ
ನಿನ್ನಿರುವಿಗೆ ಅಡಿಯಿಡುವುದು…

ಇಲ್ಲೇ, ಇದೇ ಗಳಿಗೆಯಲ್ಲೇ…
ಈ ಕ್ಷಣವೇ…
ನೀನು ಪ್ರತ್ಯಕ್ಷವಂತೆ!
ಯಾರಾದರೂ ಬಂದಾರೆಯೇ
ಎಂದು ಕೈಚಾಚಿ
ಕಾಯುತ್ತಿರುವೆಯಂತೆ
ಗುರು ಹೀಗೆ ಹೇಳಿದಾಗ
ಎಷ್ಟು ಸುಲಭವೆಂದೆಣಿಸಿದ್ದೆ…

ಅಂದಿನಿಂದ ದಿನಬೆಳಗಾದರೆ
ನಿನ್ನ ಮುಟ್ಟುವ
ಒಂದೇ ಕೋರಿಕೆ
ಹಗಲು-ರಾತ್ರಿ
ನಿನ್ನದೊಂದು ಸ್ಪರ್ಶಕೆ
ಹಾತೊರೆವ ಮನಸ್ಸೇ
ನಿನ್ನ ತಲುಪದಂತೆ
ನೋಡಿಕೊಳ್ಳುವ ಸಂಚ
ತಿಳಿದು ಕಂಗಾಲಾದೆ!
ಹಂಬಲಿಸುವ ಮನದ
ಹುನ್ನಾರಗಳು ಒಂದೇ ಎರಡೇ…

ನೋಟದ ಮಿತಿಗೆ
ತೆರೆದು ನಿಂತ ಆಗಸವೂ
ಕಂಗಳೊಳಗೆ ಇಳಿಯದು!
ಕೇಳುವ ಮಿತಿಗೆ
ಮೌನದ ಭಾಷೆ ಕೇಳಿಸದು!
ಬಿಡದ ವಾಸನೆಗಳ ನಂಟು
ಬಗಲ ಮುಳ್ಳಾಗಿಹುದು!

ನಿನ್ನೂರ ನಕ್ಷೆ ಹಿಡಿದು
ಉಸಿರ ಎಳೆಯಗುಂಟ
ಇಳಿದುಬರುವಾಗ
ಮಾಯಗಾರನಂತೆ ನುಗ್ಗಿ
ಮೌನಕೆಡಸಿ ಮಾತಿಗೆಳೆದು
ದಿಕ್ಕುತಪ್ಪಿಸುವ ಚಿತ್ತದ ಕೇಡ
ಹೇಳಲಿ ಯಾರಿಗೆ?

ನಿನ್ನ ಜಾಡ ಹಿಡಿದು
ಎಚ್ಚರದಿ ನಡೆವಾಗಲೂ
ಯಾವುದೋ ನೆನಪುಗಳು
ಯಾರದೋ ಸದ್ದುಗಳು
ಒಂದರೊಳೊಂದು ತೂರಿ
ಎತ್ತೊಯ್ಯುವವು ದೂರಕೆ… ಬಹು ದೂರಕೆ…
ಅಂಗುಲಂಗುಲಕೆ ಸೀಳುವ
ಅಸಂಖ್ಯ ಹಾದಿಗಳತ್ತ
ಹೊರಹೊರಳಿ ದಣಿವವು ಕಾಲುಗಳು…
ಮತ್ತೆ ಆ ಗವ್ವನೆಯ ಕತ್ತಲೆ
ಗಪ್ಪೆಂದು ಅಮರಿಕೊಳ್ಳುವುದು.

ಅತ್ತ ತನ್ನ ಅಸ್ತಿತ್ವಕ್ಕಾಗಿ
ಚಡಪಡಿಸುವ ಮನಸೇ
ಶೂನ್ಯವಾಗಲೂ ಬಯಸುತ್ತಿದೆ…
ಇತ್ತ ತನ್ನ ಕೋಟಿ ರೂಪಗಳ
ತಾನೇ ಕೊಲ್ಲಲು
ಹಿಂದೇಟೂ ಹಾಕುತ್ತದೆ…
ಭವದೊಳು ಮುಳುಗಿಸಿ
ಬೆಪ್ಪಾಗಿ ನಿಲ್ಲುತ್ತದೆ…

ಬಲ್ಲೆ ನಾನು
ನನ್ನಿರುವಿಕೆಯಲ್ಲಿಯೇ
ನೀನಿರುವ ಗುಟ್ಟು!
ಏನ ಮಾಡಲಿ ಹೇಳು
ಈಜು ಬಲ್ಲವಳಲ್ಲಾ
ಒಳಸುಳಿವುಗಳ ಹರಿವು
ಅರಿತವಳಲ್ಲಾ
ಗುರುವಿನಂಗಿಯ ಚುಂಗ ಹಿಡಿದು
ಮಹಾಮೌನದ ಸಂಜ್ಞೆಗೆ
ಶರಣು ಬಂದಿರುವೆ.

Previous post ಕುರುಹೇ ಬಯಲು
ಕುರುಹೇ ಬಯಲು
Next post ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2

Related Posts

ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...
ನಿಮ್ಮಿಂದಲೇ ನಾನು
Share:
Poems

ನಿಮ್ಮಿಂದಲೇ ನಾನು

February 11, 2022 ಜ್ಯೋತಿಲಿಂಗಪ್ಪ
ನಾನು ಹುಟ್ಟಿದ ಮೇಲೆ ಹುಟ್ಟಿತು ನನ್ನ ಇತಿಹಾಸ ನಾನು ಸತ್ತ ಮೇಲೆ ಹುಟ್ಟಿದ್ದು ನನ್ನ ಚರಿತ್ರೆ ಈ ನಡುವಿನ ಅಂತರ ನಾನು ಇದ್ದುದ್ದು ನನ್ನ ಸುಳ್ಳು ನಿಜ ನಾನು ಹೇಳಬಲ್ಲನೇ ನನ್ನ...

Comments 2

  1. K S Mallesh
    Feb 17, 2026 Reply

    ನಿನ್ನದೊಂದು ಸ್ಪರ್ಷ ಒಳ್ಳೆಯ ಕವನ. ಕವನ ಎನ್ನುವುದಕ್ಕಿಂತಲೂ ಒಂದು ನಿಜ ಹಂಬಲಹೊತ್ತು ಹುಡುಕಾಡುತ್ತಿರುವ ವ್ಯಕ್ತಿಯೊಬ್ಬರ ಆತ್ಮಗಾಥೆ. ಬಿಡದ ಲೌಕಿಕದ ಸೆಳೆತಗಳಲ್ಲಿ ಸಿಲುಕಿ ಬೇಸತ್ತು  ಅಲೌಕಿಕಗಳೆಡೆಗೆ ಕಾತರಿಸುವ ಮನಕ್ಕೆ ಕಿಂಚಿತ್ ಅನುಗ್ರಹ ಸ್ಪರ್ಶ ರೂಪದಲ್ಲಿ
    ಸಿಕ್ಕರೆ ಸಾಕೆನಿಸಿದೆ.  ಸರಳ ಪದಗಳಲ್ಲಿ ತುಂಡು ಸಾಲುಗಳಲ್ಲಿ ಭಾವನೆಗಳ ಹೂಗೊಂಚಲಿದೆ. ನಿಮಗೆ ನಮನಗಳು

  2. ಜ್ಯೋತಿಲಿಂಗಪ್ಪ, ಬೆಂಗಳೂರು
    Feb 24, 2026 Reply

    ಸ್ಪರ್ಶ…ಒಳ್ಳೆಯ ಸ್ಪರ್ಶ..ಓದು
    ತುಂಬಾ ಮುದ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
Copyright © 2026 Bayalu