Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನದೊಂದು ಸ್ಪರ್ಶ
Share:
Poems February 16, 2026 ಕೆ.ಆರ್ ಮಂಗಳಾ

ನಿನ್ನದೊಂದು ಸ್ಪರ್ಶ

ಅಷ್ಟು ಸಲೀಸಲ್ಲಾ ಬಿಡು
ನಿನ್ನ ಕೈ ಹಿಡಿಯುವುದು
ಎದುರಿದ್ದೂ ಅವಿತಿರುವ
ನಿನ್ನಿರುವಿಗೆ ಅಡಿಯಿಡುವುದು…

ಇಲ್ಲೇ, ಇದೇ ಗಳಿಗೆಯಲ್ಲೇ…
ಈ ಕ್ಷಣವೇ…
ನೀನು ಪ್ರತ್ಯಕ್ಷವಂತೆ!
ಯಾರಾದರೂ ಬಂದಾರೆಯೇ
ಎಂದು ಕೈಚಾಚಿ
ಕಾಯುತ್ತಿರುವೆಯಂತೆ
ಗುರು ಹೀಗೆ ಹೇಳಿದಾಗ
ಎಷ್ಟು ಸುಲಭವೆಂದೆಣಿಸಿದ್ದೆ…

ಅಂದಿನಿಂದ ದಿನಬೆಳಗಾದರೆ
ನಿನ್ನ ಮುಟ್ಟುವ
ಒಂದೇ ಕೋರಿಕೆ
ಹಗಲು-ರಾತ್ರಿ
ನಿನ್ನದೊಂದು ಸ್ಪರ್ಶಕೆ
ಹಾತೊರೆವ ಮನಸ್ಸೇ
ನಿನ್ನ ತಲುಪದಂತೆ
ನೋಡಿಕೊಳ್ಳುವ ಸಂಚ
ತಿಳಿದು ಕಂಗಾಲಾದೆ!
ಹಂಬಲಿಸುವ ಮನದ
ಹುನ್ನಾರಗಳು ಒಂದೇ ಎರಡೇ…

ನೋಟದ ಮಿತಿಗೆ
ತೆರೆದು ನಿಂತ ಆಗಸವೂ
ಕಂಗಳೊಳಗೆ ಇಳಿಯದು!
ಕೇಳುವ ಮಿತಿಗೆ
ಮೌನದ ಭಾಷೆ ಕೇಳಿಸದು!
ಬಿಡದ ವಾಸನೆಗಳ ನಂಟು
ಬಗಲ ಮುಳ್ಳಾಗಿಹುದು!

ನಿನ್ನೂರ ನಕ್ಷೆ ಹಿಡಿದು
ಉಸಿರ ಎಳೆಯಗುಂಟ
ಇಳಿದುಬರುವಾಗ
ಮಾಯಗಾರನಂತೆ ನುಗ್ಗಿ
ಮೌನಕೆಡಸಿ ಮಾತಿಗೆಳೆದು
ದಿಕ್ಕುತಪ್ಪಿಸುವ ಚಿತ್ತದ ಕೇಡ
ಹೇಳಲಿ ಯಾರಿಗೆ?

ನಿನ್ನ ಜಾಡ ಹಿಡಿದು
ಎಚ್ಚರದಿ ನಡೆವಾಗಲೂ
ಯಾವುದೋ ನೆನಪುಗಳು
ಯಾರದೋ ಸದ್ದುಗಳು
ಒಂದರೊಳೊಂದು ತೂರಿ
ಎತ್ತೊಯ್ಯುವವು ದೂರಕೆ… ಬಹು ದೂರಕೆ…
ಅಂಗುಲಂಗುಲಕೆ ಸೀಳುವ
ಅಸಂಖ್ಯ ಹಾದಿಗಳತ್ತ
ಹೊರಹೊರಳಿ ದಣಿವವು ಕಾಲುಗಳು…
ಮತ್ತೆ ಆ ಗವ್ವನೆಯ ಕತ್ತಲೆ
ಗಪ್ಪೆಂದು ಅಮರಿಕೊಳ್ಳುವುದು.

ಅತ್ತ ತನ್ನ ಅಸ್ತಿತ್ವಕ್ಕಾಗಿ
ಚಡಪಡಿಸುವ ಮನಸೇ
ಶೂನ್ಯವಾಗಲೂ ಬಯಸುತ್ತಿದೆ…
ಇತ್ತ ತನ್ನ ಕೋಟಿ ರೂಪಗಳ
ತಾನೇ ಕೊಲ್ಲಲು
ಹಿಂದೇಟೂ ಹಾಕುತ್ತದೆ…
ಭವದೊಳು ಮುಳುಗಿಸಿ
ಬೆಪ್ಪಾಗಿ ನಿಲ್ಲುತ್ತದೆ…

ಬಲ್ಲೆ ನಾನು
ನನ್ನಿರುವಿಕೆಯಲ್ಲಿಯೇ
ನೀನಿರುವ ಗುಟ್ಟು!
ಏನ ಮಾಡಲಿ ಹೇಳು
ಈಜು ಬಲ್ಲವಳಲ್ಲಾ
ಒಳಸುಳಿವುಗಳ ಹರಿವು
ಅರಿತವಳಲ್ಲಾ
ಗುರುವಿನಂಗಿಯ ಚುಂಗ ಹಿಡಿದು
ಮಹಾಮೌನದ ಸಂಜ್ಞೆಗೆ
ಶರಣು ಬಂದಿರುವೆ.

Previous post ಕುರುಹೇ ಬಯಲು
ಕುರುಹೇ ಬಯಲು
Next post ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2

Related Posts

ಹೆಸರಿಲ್ಲದಾ ಊರಿನ ಹಾಡು
Share:
Poems

ಹೆಸರಿಲ್ಲದಾ ಊರಿನ ಹಾಡು

May 6, 2020 ಪದ್ಮಾಲಯ ನಾಗರಾಜ್
ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ// ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ ಶೋಕಿ ದಾರಿಯು...
ನನ್ನ ಶರಣರು…
Share:
Poems

ನನ್ನ ಶರಣರು…

April 9, 2021 ಕೆ.ಆರ್ ಮಂಗಳಾ
ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 2

  1. K S Mallesh
    Feb 17, 2026 Reply

    ನಿನ್ನದೊಂದು ಸ್ಪರ್ಷ ಒಳ್ಳೆಯ ಕವನ. ಕವನ ಎನ್ನುವುದಕ್ಕಿಂತಲೂ ಒಂದು ನಿಜ ಹಂಬಲಹೊತ್ತು ಹುಡುಕಾಡುತ್ತಿರುವ ವ್ಯಕ್ತಿಯೊಬ್ಬರ ಆತ್ಮಗಾಥೆ. ಬಿಡದ ಲೌಕಿಕದ ಸೆಳೆತಗಳಲ್ಲಿ ಸಿಲುಕಿ ಬೇಸತ್ತು  ಅಲೌಕಿಕಗಳೆಡೆಗೆ ಕಾತರಿಸುವ ಮನಕ್ಕೆ ಕಿಂಚಿತ್ ಅನುಗ್ರಹ ಸ್ಪರ್ಶ ರೂಪದಲ್ಲಿ
    ಸಿಕ್ಕರೆ ಸಾಕೆನಿಸಿದೆ.  ಸರಳ ಪದಗಳಲ್ಲಿ ತುಂಡು ಸಾಲುಗಳಲ್ಲಿ ಭಾವನೆಗಳ ಹೂಗೊಂಚಲಿದೆ. ನಿಮಗೆ ನಮನಗಳು

  2. ಜ್ಯೋತಿಲಿಂಗಪ್ಪ, ಬೆಂಗಳೂರು
    Feb 24, 2026 Reply

    ಸ್ಪರ್ಶ…ಒಳ್ಳೆಯ ಸ್ಪರ್ಶ..ಓದು
    ತುಂಬಾ ಮುದ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
February 6, 2025
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
Copyright © 2026 Bayalu