Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನದೊಂದು ಸ್ಪರ್ಶ
Share:
Poems February 16, 2026 ಕೆ.ಆರ್ ಮಂಗಳಾ

ನಿನ್ನದೊಂದು ಸ್ಪರ್ಶ

ಅಷ್ಟು ಸಲೀಸಲ್ಲಾ ಬಿಡು
ನಿನ್ನ ಕೈ ಹಿಡಿಯುವುದು
ಎದುರಿದ್ದೂ ಅವಿತಿರುವ
ನಿನ್ನಿರುವಿಗೆ ಅಡಿಯಿಡುವುದು…

ಇಲ್ಲೇ, ಇದೇ ಗಳಿಗೆಯಲ್ಲೇ…
ಈ ಕ್ಷಣವೇ…
ನೀನು ಪ್ರತ್ಯಕ್ಷವಂತೆ!
ಯಾರಾದರೂ ಬಂದಾರೆಯೇ
ಎಂದು ಕೈಚಾಚಿ
ಕಾಯುತ್ತಿರುವೆಯಂತೆ
ಗುರು ಹೀಗೆ ಹೇಳಿದಾಗ
ಎಷ್ಟು ಸುಲಭವೆಂದೆಣಿಸಿದ್ದೆ…

ಅಂದಿನಿಂದ ದಿನಬೆಳಗಾದರೆ
ನಿನ್ನ ಮುಟ್ಟುವ
ಒಂದೇ ಕೋರಿಕೆ
ಹಗಲು-ರಾತ್ರಿ
ನಿನ್ನದೊಂದು ಸ್ಪರ್ಶಕೆ
ಹಾತೊರೆವ ಮನಸ್ಸೇ
ನಿನ್ನ ತಲುಪದಂತೆ
ನೋಡಿಕೊಳ್ಳುವ ಸಂಚ
ತಿಳಿದು ಕಂಗಾಲಾದೆ!
ಹಂಬಲಿಸುವ ಮನದ
ಹುನ್ನಾರಗಳು ಒಂದೇ ಎರಡೇ…

ನೋಟದ ಮಿತಿಗೆ
ತೆರೆದು ನಿಂತ ಆಗಸವೂ
ಕಂಗಳೊಳಗೆ ಇಳಿಯದು!
ಕೇಳುವ ಮಿತಿಗೆ
ಮೌನದ ಭಾಷೆ ಕೇಳಿಸದು!
ಬಿಡದ ವಾಸನೆಗಳ ನಂಟು
ಬಗಲ ಮುಳ್ಳಾಗಿಹುದು!

ನಿನ್ನೂರ ನಕ್ಷೆ ಹಿಡಿದು
ಉಸಿರ ಎಳೆಯಗುಂಟ
ಇಳಿದುಬರುವಾಗ
ಮಾಯಗಾರನಂತೆ ನುಗ್ಗಿ
ಮೌನಕೆಡಸಿ ಮಾತಿಗೆಳೆದು
ದಿಕ್ಕುತಪ್ಪಿಸುವ ಚಿತ್ತದ ಕೇಡ
ಹೇಳಲಿ ಯಾರಿಗೆ?

ನಿನ್ನ ಜಾಡ ಹಿಡಿದು
ಎಚ್ಚರದಿ ನಡೆವಾಗಲೂ
ಯಾವುದೋ ನೆನಪುಗಳು
ಯಾರದೋ ಸದ್ದುಗಳು
ಒಂದರೊಳೊಂದು ತೂರಿ
ಎತ್ತೊಯ್ಯುವವು ದೂರಕೆ… ಬಹು ದೂರಕೆ…
ಅಂಗುಲಂಗುಲಕೆ ಸೀಳುವ
ಅಸಂಖ್ಯ ಹಾದಿಗಳತ್ತ
ಹೊರಹೊರಳಿ ದಣಿವವು ಕಾಲುಗಳು…
ಮತ್ತೆ ಆ ಗವ್ವನೆಯ ಕತ್ತಲೆ
ಗಪ್ಪೆಂದು ಅಮರಿಕೊಳ್ಳುವುದು.

ಅತ್ತ ತನ್ನ ಅಸ್ತಿತ್ವಕ್ಕಾಗಿ
ಚಡಪಡಿಸುವ ಮನಸೇ
ಶೂನ್ಯವಾಗಲೂ ಬಯಸುತ್ತಿದೆ…
ಇತ್ತ ತನ್ನ ಕೋಟಿ ರೂಪಗಳ
ತಾನೇ ಕೊಲ್ಲಲು
ಹಿಂದೇಟೂ ಹಾಕುತ್ತದೆ…
ಭವದೊಳು ಮುಳುಗಿಸಿ
ಬೆಪ್ಪಾಗಿ ನಿಲ್ಲುತ್ತದೆ…

ಬಲ್ಲೆ ನಾನು
ನನ್ನಿರುವಿಕೆಯಲ್ಲಿಯೇ
ನೀನಿರುವ ಗುಟ್ಟು!
ಏನ ಮಾಡಲಿ ಹೇಳು
ಈಜು ಬಲ್ಲವಳಲ್ಲಾ
ಒಳಸುಳಿವುಗಳ ಹರಿವು
ಅರಿತವಳಲ್ಲಾ
ಗುರುವಿನಂಗಿಯ ಚುಂಗ ಹಿಡಿದು
ಮಹಾಮೌನದ ಸಂಜ್ಞೆಗೆ
ಶರಣು ಬಂದಿರುವೆ.

Previous post ಕುರುಹೇ ಬಯಲು
ಕುರುಹೇ ಬಯಲು
Next post ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2

Related Posts

ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...

Comments 2

  1. K S Mallesh
    Feb 17, 2026 Reply

    ನಿನ್ನದೊಂದು ಸ್ಪರ್ಷ ಒಳ್ಳೆಯ ಕವನ. ಕವನ ಎನ್ನುವುದಕ್ಕಿಂತಲೂ ಒಂದು ನಿಜ ಹಂಬಲಹೊತ್ತು ಹುಡುಕಾಡುತ್ತಿರುವ ವ್ಯಕ್ತಿಯೊಬ್ಬರ ಆತ್ಮಗಾಥೆ. ಬಿಡದ ಲೌಕಿಕದ ಸೆಳೆತಗಳಲ್ಲಿ ಸಿಲುಕಿ ಬೇಸತ್ತು  ಅಲೌಕಿಕಗಳೆಡೆಗೆ ಕಾತರಿಸುವ ಮನಕ್ಕೆ ಕಿಂಚಿತ್ ಅನುಗ್ರಹ ಸ್ಪರ್ಶ ರೂಪದಲ್ಲಿ
    ಸಿಕ್ಕರೆ ಸಾಕೆನಿಸಿದೆ.  ಸರಳ ಪದಗಳಲ್ಲಿ ತುಂಡು ಸಾಲುಗಳಲ್ಲಿ ಭಾವನೆಗಳ ಹೂಗೊಂಚಲಿದೆ. ನಿಮಗೆ ನಮನಗಳು

  2. ಜ್ಯೋತಿಲಿಂಗಪ್ಪ, ಬೆಂಗಳೂರು
    Feb 24, 2026 Reply

    ಸ್ಪರ್ಶ…ಒಳ್ಳೆಯ ಸ್ಪರ್ಶ..ಓದು
    ತುಂಬಾ ಮುದ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
ನನ್ನ ಶರಣರು…
ನನ್ನ ಶರಣರು…
April 9, 2021
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
Copyright © 2026 Bayalu