Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
ನಾನು… ನನ್ನದು
Share:
Poems

ನಾನು… ನನ್ನದು

July 4, 2021 ಜ್ಯೋತಿಲಿಂಗಪ್ಪ
ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ ಕನ್ನಡಿ
ಈ ಕನ್ನಡಿ
March 6, 2024
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಗುರುಪಥ
ಗುರುಪಥ
January 4, 2020
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಅಲ್ಲಮಪ್ರಭುದೇವರ ಸ್ವರವಚನಗಳು
ಅಲ್ಲಮಪ್ರಭುದೇವರ ಸ್ವರವಚನಗಳು
December 9, 2025
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
Copyright © 2026 Bayalu