Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ನಿಮ್ಮಿಂದಲೇ ನಾನು
Share:
Poems

ನಿಮ್ಮಿಂದಲೇ ನಾನು

February 11, 2022 ಜ್ಯೋತಿಲಿಂಗಪ್ಪ
ನಾನು ಹುಟ್ಟಿದ ಮೇಲೆ ಹುಟ್ಟಿತು ನನ್ನ ಇತಿಹಾಸ ನಾನು ಸತ್ತ ಮೇಲೆ ಹುಟ್ಟಿದ್ದು ನನ್ನ ಚರಿತ್ರೆ ಈ ನಡುವಿನ ಅಂತರ ನಾನು ಇದ್ದುದ್ದು ನನ್ನ ಸುಳ್ಳು ನಿಜ ನಾನು ಹೇಳಬಲ್ಲನೇ ನನ್ನ...
ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
ವಚನಕಾರ ಸಿದ್ಧರಾಮ ಮತ್ತು ರಾಘವಾಂಕನ ಸಿದ್ಧರಾಮ
December 6, 2020
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
Copyright © 2026 Bayalu