Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...
ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ ಬಳ್ಳಿ…
ಈ ಬಳ್ಳಿ…
October 21, 2024
ಗೇಣು ದಾರಿ
ಗೇಣು ದಾರಿ
July 10, 2023
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಹುಡುಕಾಟ
ಹುಡುಕಾಟ
July 21, 2024
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
Copyright © 2025 Bayalu