Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಮಾಯದ ಗಾಯ
ಮಾಯದ ಗಾಯ
October 19, 2025
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
Copyright © 2026 Bayalu