Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...
ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
WHO AM I?
WHO AM I?
June 17, 2020
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ನೀರು… ಬರಿ ನೀರೇ?
ನೀರು… ಬರಿ ನೀರೇ?
December 13, 2024
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಶರಣ- ಎಂದರೆ…
ಶರಣ- ಎಂದರೆ…
March 6, 2020
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ತತ್ವಪದಕಾರರ  ಸಾಮರಸ್ಯ ಲೋಕ
ತತ್ವಪದಕಾರರ ಸಾಮರಸ್ಯ ಲೋಕ
September 6, 2023
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
Copyright © 2026 Bayalu