Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...
ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಭವ ರಾಟಾಳ
ಭವ ರಾಟಾಳ
September 10, 2022
ದಾಸೋಹ ತತ್ವ
ದಾಸೋಹ ತತ್ವ
January 10, 2021
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
Copyright © 2026 Bayalu