Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
Copyright © 2026 Bayalu