Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ನಾನುವಿನ ಉಪಟಳ
Share:
Poems

ನಾನುವಿನ ಉಪಟಳ

December 13, 2024 ಕೆ.ಆರ್ ಮಂಗಳಾ
ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಬಯಲಾಟ
ಬಯಲಾಟ
March 17, 2021
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
Copyright © 2026 Bayalu