Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀನು ನಾನಲ್ಲ…
Share:
Poems July 21, 2024 ಕೆ.ಆರ್ ಮಂಗಳಾ

ನೀನು ನಾನಲ್ಲ…

ಹಿಂದಿನ ಹೆಜ್ಜೆಗಳಲಿ
ತನ್ನನ್ನೇ ಅರಸುವ
ಮುಂದಿನ ದಿನಗಳಲಿ
ತನ್ನನ್ನೇ ಮೆರೆಯಿಸುವ
ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ

ಎಂದೋ ಆದುದನು
ಜತನದಲಿ ಕೂಡಿಟ್ಟು
ಎಲ್ಲವನೂ ಎಲ್ಲರನೂ
ಆ ಅಳತೆಯಲೇ ತೂಗುವ
ತಿಕಲು ಬುದ್ಧಿಯೇ ನೀನು ನಾನಲ್ಲ

ಕಂಗಳಲಿ ಕರುಳಾಗಿ
ರಸದ ದಾಸನಾಗಿ
ವಾಸನೆಯ ಜಾಡಿಗಿಳಿದು
ಸ್ಪರ್ಶಸುಖಕೆ ಬೆನ್ನುಹತ್ತಿ
ಹಿತವಾದುದನೇ ಕೇಳಲೆಳೆಸುವ ನೀನು ನಾನಲ್ಲ

ನೆನಹಿನಲಿ ಅಲೆಯಾಗಿ
ನಡೆಯಲ್ಲಿ ಸೋಗಾಗಿ
ನುಡಿಯಲ್ಲಿ ಕಪಟವಾಗಿ
ಕನಸಿನಲಿ ಬತ್ತಲೆಯಾಗಿ
ಚಿತ್ತದಲಿ ಹೆಪ್ಪುಗಟ್ಟಿದ ನೀನು ನಾನಲ್ಲ

ಆಸೆಗಣ್ಣಾಗಿ ಸುಖಕೆ ಬಾಯಾರಿ
ಸಾಧಿಸುವ ಹುಚ್ಚಾಗಿ
ಕೀರ್ತಿಕಾಮನೆಗೆ ಕಳವಳಿಸಿ
ಗುಪ್ತ ಬಯಕೆಗಳ ದಂಡಾಗಿ
ಒಳಗೊಳಗೆ ಅಂಡಲೆವ ನೀನು ನಾನಲ್ಲ

ಬಿರುಮಾತಿನ ಬಾಣವಾಗಿ
ದೂರುಗಳ ಧಾರೆಯಾಗಿ
ದ್ವೇಷದ ಕೊಂಬಾಗಿ
ಕುದಿವ ಮನವಾಗಿ, ಮೊನಚು ಅಂಬಾಗಿ
ಇದಿರ ಇರಿಯಲು ಕಾಯುವ ನೀನು ನಾನಲ್ಲ

ಮಾತಿಗೆ ಮಾತಾಗಿ
ದ್ವೇಷಕ್ಕೆ ದ್ವೇಷವಾಗಿ
ಕಷ್ಟಗಳಿಗೆ ಕೊಚ್ಚಿಹೋಗಿ
ಬೇಕು ಬೇಡಗಳ ಆಟದಲಿ ಸಿಲುಕಿ
ಕೊರಗಿ ಕಣ್ಣೀರಾಗುವ ನೀನು ನಾನಲ್ಲ

ಮೆಚ್ಚುಗೆಗೆ ಮರುಳಾಗುವ
ಹೊಗಳಿಕೆಗೆ ಹಿರಿಹಿಗ್ಗುವ
ತೆಗಳಿಕೆಗೆ ಮುನಿಸೇಳುವ
ಬೇಕಾದವರ ಅಟ್ಟಕ್ಕೇರಿಸುತಾ
ಬೇಡಾದವರ ನೀಕರಿಸುವ ನೀನು ನಾನಲ್ಲ

ಅಸೂಯೆಯಲಿ ಬೇಯುವ
ಎಡಬಿಡಂಗಿಯಲಿ ತುಯ್ಯುವ
ಆಲಸಕೆ ಮೈಚಾಚುವ
ಜ್ಞಾನಕ್ಕೆ ಮರುಳಾಗುವ
ಚಟಗಳಿಗೆ ಬೆನ್ನು ಬೀಳುವ ನೀನು ನಾನಲ್ಲ.

ಈ ಬಗೆಬಗೆಯ ಹೊಂಡದಲಿ
ಮುಳಿಗೇಳುವ ಮಜದಲಿ
ನಿಜದ ನಾನು ನನಗೆ ಸಿಗಲೇ ಇಲ್ಲ
ಇದೆ-ಇಲ್ಲಗಳ ನಡುವೆ
ಅಲ್ಲದ್ದು ತೂರಿಕೊಂಡು
ಬದುಕು ಲಪಟಾಯಿಸಿದ್ದು ಅರಿವಾಗಲಿಲ್ಲ.

Previous post ಹುಡುಕಾಟ
ಹುಡುಕಾಟ
Next post ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್

Related Posts

ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ನೀರು… ಬರಿ ನೀರೇ?
ನೀರು… ಬರಿ ನೀರೇ?
December 13, 2024
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
Copyright © 2026 Bayalu