Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀನು ನಾನಲ್ಲ…
Share:
Poems July 21, 2024 ಕೆ.ಆರ್ ಮಂಗಳಾ

ನೀನು ನಾನಲ್ಲ…

ಹಿಂದಿನ ಹೆಜ್ಜೆಗಳಲಿ
ತನ್ನನ್ನೇ ಅರಸುವ
ಮುಂದಿನ ದಿನಗಳಲಿ
ತನ್ನನ್ನೇ ಮೆರೆಯಿಸುವ
ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ

ಎಂದೋ ಆದುದನು
ಜತನದಲಿ ಕೂಡಿಟ್ಟು
ಎಲ್ಲವನೂ ಎಲ್ಲರನೂ
ಆ ಅಳತೆಯಲೇ ತೂಗುವ
ತಿಕಲು ಬುದ್ಧಿಯೇ ನೀನು ನಾನಲ್ಲ

ಕಂಗಳಲಿ ಕರುಳಾಗಿ
ರಸದ ದಾಸನಾಗಿ
ವಾಸನೆಯ ಜಾಡಿಗಿಳಿದು
ಸ್ಪರ್ಶಸುಖಕೆ ಬೆನ್ನುಹತ್ತಿ
ಹಿತವಾದುದನೇ ಕೇಳಲೆಳೆಸುವ ನೀನು ನಾನಲ್ಲ

ನೆನಹಿನಲಿ ಅಲೆಯಾಗಿ
ನಡೆಯಲ್ಲಿ ಸೋಗಾಗಿ
ನುಡಿಯಲ್ಲಿ ಕಪಟವಾಗಿ
ಕನಸಿನಲಿ ಬತ್ತಲೆಯಾಗಿ
ಚಿತ್ತದಲಿ ಹೆಪ್ಪುಗಟ್ಟಿದ ನೀನು ನಾನಲ್ಲ

ಆಸೆಗಣ್ಣಾಗಿ ಸುಖಕೆ ಬಾಯಾರಿ
ಸಾಧಿಸುವ ಹುಚ್ಚಾಗಿ
ಕೀರ್ತಿಕಾಮನೆಗೆ ಕಳವಳಿಸಿ
ಗುಪ್ತ ಬಯಕೆಗಳ ದಂಡಾಗಿ
ಒಳಗೊಳಗೆ ಅಂಡಲೆವ ನೀನು ನಾನಲ್ಲ

ಬಿರುಮಾತಿನ ಬಾಣವಾಗಿ
ದೂರುಗಳ ಧಾರೆಯಾಗಿ
ದ್ವೇಷದ ಕೊಂಬಾಗಿ
ಕುದಿವ ಮನವಾಗಿ, ಮೊನಚು ಅಂಬಾಗಿ
ಇದಿರ ಇರಿಯಲು ಕಾಯುವ ನೀನು ನಾನಲ್ಲ

ಮಾತಿಗೆ ಮಾತಾಗಿ
ದ್ವೇಷಕ್ಕೆ ದ್ವೇಷವಾಗಿ
ಕಷ್ಟಗಳಿಗೆ ಕೊಚ್ಚಿಹೋಗಿ
ಬೇಕು ಬೇಡಗಳ ಆಟದಲಿ ಸಿಲುಕಿ
ಕೊರಗಿ ಕಣ್ಣೀರಾಗುವ ನೀನು ನಾನಲ್ಲ

ಮೆಚ್ಚುಗೆಗೆ ಮರುಳಾಗುವ
ಹೊಗಳಿಕೆಗೆ ಹಿರಿಹಿಗ್ಗುವ
ತೆಗಳಿಕೆಗೆ ಮುನಿಸೇಳುವ
ಬೇಕಾದವರ ಅಟ್ಟಕ್ಕೇರಿಸುತಾ
ಬೇಡಾದವರ ನೀಕರಿಸುವ ನೀನು ನಾನಲ್ಲ

ಅಸೂಯೆಯಲಿ ಬೇಯುವ
ಎಡಬಿಡಂಗಿಯಲಿ ತುಯ್ಯುವ
ಆಲಸಕೆ ಮೈಚಾಚುವ
ಜ್ಞಾನಕ್ಕೆ ಮರುಳಾಗುವ
ಚಟಗಳಿಗೆ ಬೆನ್ನು ಬೀಳುವ ನೀನು ನಾನಲ್ಲ.

ಈ ಬಗೆಬಗೆಯ ಹೊಂಡದಲಿ
ಮುಳಿಗೇಳುವ ಮಜದಲಿ
ನಿಜದ ನಾನು ನನಗೆ ಸಿಗಲೇ ಇಲ್ಲ
ಇದೆ-ಇಲ್ಲಗಳ ನಡುವೆ
ಅಲ್ಲದ್ದು ತೂರಿಕೊಂಡು
ಬದುಕು ಲಪಟಾಯಿಸಿದ್ದು ಅರಿವಾಗಲಿಲ್ಲ.

Previous post ಹುಡುಕಾಟ
ಹುಡುಕಾಟ
Next post ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್

Related Posts

ಮಾತು ಮಾಯೆ
Share:
Poems

ಮಾತು ಮಾಯೆ

July 4, 2021 ಕೆ.ಆರ್ ಮಂಗಳಾ
ಶಬ್ದಗಳ ಅರಣ್ಯದಲಿ ಕಳೆದು ಹೋಗಿದ್ದೀ ನಾನಿನ್ನು ಮಾತನಾಡಲಾರೆ ನಿನ್ನ ನೀನೇ ಹುಡುಕಿಕೋ- ಅಂದ ಗುರು ಹೀಗೊಂದು ದಿನ ಮೌನವಾಗಿಬಿಟ್ಟ! ಸುಳ್ಳಲ್ಲ ನಿಜ, ಅವರ ಒಂದೊಂದು ನುಡಿಗಳೂ...
ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಿನ್ನದೊಂದು ಸ್ಪರ್ಶ
ನಿನ್ನದೊಂದು ಸ್ಪರ್ಶ
February 16, 2026
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ವಚನ – ಚಿಂತನ
ವಚನ – ಚಿಂತನ
October 10, 2023
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಯಾಕೀ ಗೊಡವೆ?
ಯಾಕೀ ಗೊಡವೆ?
August 10, 2023
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
Copyright © 2026 Bayalu