Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಹುಡುಕಾಟ…
Share:
Poems

ಹುಡುಕಾಟ…

August 8, 2021 ಜ್ಯೋತಿಲಿಂಗಪ್ಪ
ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...
ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗೇಣು ದಾರಿ
ಗೇಣು ದಾರಿ
July 10, 2023
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಹಾಯ್ಕುಗಳು
ಹಾಯ್ಕುಗಳು
November 10, 2022
ನೋಟದ ಕೂಟ…
ನೋಟದ ಕೂಟ…
May 10, 2023
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ಸನಾತನ ಧರ್ಮ
ಸನಾತನ ಧರ್ಮ
October 10, 2023
ಯಾಕೀ ಗೊಡವೆ?
ಯಾಕೀ ಗೊಡವೆ?
August 10, 2023
ನೆಲದ ಮರೆಯ ನಿಧಾನದಂತೆ…
ನೆಲದ ಮರೆಯ ನಿಧಾನದಂತೆ…
April 29, 2018
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಮನಸ್ಸು
ಮನಸ್ಸು
September 7, 2020
Copyright © 2026 Bayalu